ಪುತ್ತೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸುಳ್ಯಪದವು ನಿವಾಸಿ ಪ್ರಸ್ತುತ ಪಡೀಲಿನಲ್ಲಿ ವಾಸವಿರುವ ರಾಜೇಂದ್ರ ಪ್ರಸಾದ್(42ವ.) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತ ರಾಜೇಂದ್ರ ಪ್ರಸಾದ್ ರವರಿಗೆ ಮನೆಯಲ್ಲಿದ್ದ ಸಂದರ್ಭ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸ್ವತಃ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ರಾಜೇಂದ್ರ ಪ್ರಸಾದ್ ರವರು ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಆದರೆ ಅಲ್ಲಿ ಇಸಿಜಿ ತೆಗೆಯುವ ಮೊದಲೇ ಸಾವನ್ನಪ್ಪಿದ್ದಾರೆ.
ಇನ್ನು ಮೃತ ರಾಜೇಂದ್ರ ಪ್ರಸಾದ್ ರವರು ಪ್ರಸ್ತುತ ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ರವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ(2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ರವರ ಶಿಷ್ಯರಾಗಿದ್ದರು ಎನ್ನಲಾಗಿದೆ.
ಮೃತ ರಾಜೇಂದ್ರ ಪ್ರಸಾದ್ ರವರು ತಂದೆ ರಾಮಕೃಷ್ಣ, ತಾಯಿ ಇಂದಿರಾವತಿ, ಪತ್ನಿ ಬಂಟ್ವಾಳ ಬಿಇಒ ಕಛೇರಿಯಲ್ಲಿ ಕ್ಲರ್ಕ್ ಆಗಿರುವ ಪ್ರತಿಮಾ, ಪುತ್ರಿಯರಾದ ಸಮನ್ವಿ, ಮಾನ್ವಿ, ಸಹೋದರಿ ಐಶ್ವರ್ಯರವರನ್ನು ಅಗಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…