ಪುತ್ತೂರು : ಲಾರಿಯ ಟಯರ್‌ ಬದಲಿಸುವಾಗ  ಹೊರಚಿಮ್ಮಿದ ಡಿಸ್ಕ್: ವ್ಯಕ್ತಿಗೆ ಗಂಭೀರ ಗಾಯ – vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ಲಾರಿಯ ಟಯರ್‌ ಬದಲಿಸುವಾಗ  ಹೊರಚಿಮ್ಮಿದ ಡಿಸ್ಕ್: ವ್ಯಕ್ತಿಗೆ ಗಂಭೀರ ಗಾಯ 

ಪುತ್ತೂರು : ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಪೋಟದ ಭೀಕರತೆ ತೋರಿಸುತ್ತಿದೆ.

ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು.

ಕೇಂದ್ರ ಬಜೆಟ್: ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ – vishwanews24

ಬಳಿಕ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ ಸ್ಟೋಟಗೊಂಡಿದ್ದು, ಅದರ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್‌ ಗೆ ಎಸೆಯಲ್ಪಟ್ಟಿದ್ದಾರೆ.

Leave a Reply