ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಮದುವೆ ಭರವಸೆ ನೀಡಿ ಯುವತಿಯನ್ನು ಆರೋಪಿ ವಂಚಿಸಿದ್ದ. ಯುವತಿ ಗರ್ಭಿಣಿಯಾದ ಬಳಿಕ ಕೃಷ್ಣ ಜೆ. ರಾವ್ ಕೈಕೊಟ್ಟಿದ್ದ. ಯುವತಿ ಮಗುವಿಗೆ ಜನ್ಮ ನೀಡಿದರೂ ಮದುವೆಯಾಗಲು ನಿರಾಕರಿಸಿದ್ದ.
ಬಳಿಕ ಬಂಧನಕ್ಕೊಳಗಾಗಿ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಕ್ರಿಮಿನಲ್ ಪ್ರಕರಣಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸಂತ್ರಸ್ತೆ ಹಾಗೂ ಮಗುವಿಗೆ ತಿಂಗಳಿಗೆ 75,000 ರೂಪಾಯಿ ಜೀವನಾಂಶ ನೀಡಲು ಕೋರ್ಟ್ ಆದೇಶ ಹೊರಡಿಸಿದೆ.
ಒಂದು ವಾರದೊಳಗೆ ಮೊದಲ ಕಂತು ಪಾವತಿಸಲು ಕೋರ್ಟ್ ಸೂಚನೆ ನೀಡಿದೆ. ಮುಂದಿನ ಎಲ್ಲಾ ನ್ಯಾಯಾಂಗ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ನೀಡಲಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನರ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…