Featured

ಪುತ್ತೂರು : ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳ್ಳತನ ಪ್ರಕರಣ; ಆರೋಪಿ ಬಂಧನ – vishwanews24

ಪುತ್ತೂರು : ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳ್ಳತನ ಪ್ರಕರಣ; ಆರೋಪಿ ಬಂಧನ

ಬೆಳ್ಳಾರೆ: ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಸೆ.2ರಂದು ಬೆಳಿಗ್ಗೆ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯರು ಮೇಲ್ವಿಚಾರಕಿಗೆ ಮಾಹಿತಿ ನೀಡಿದ್ದರು.

ನಂತರ ವಿದ್ಯಾರ್ಥಿನಿಲಯದಲ್ಲಿದ್ದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಸೆ.2ರ ಮುಂಜಾನೆ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳಲ್ಲಿ ಕೆಲವು ಬಟ್ಟೆಗಳನ್ನು ಕಳವು ಮಾಡಿಕೊಂಡು ತೆರಳಿರುವುದು ಕಂಡುಬಂದಿದೆ.

ಈ ಕುರಿತು ಸೆ.5ರಂದು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 54/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 331(4), 305ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ಸೆ.7ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಸೆ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Vishwa News 24

Recent Posts

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಿಎಂ ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್ – vishwanews24

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಿಎಂ ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್ ಕಾರ್ಕಳ: ಕಾರ್ಕಳ…

35 minutes ago

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ: ಸೆ.17ರಿಂದ ಬಿಜೆಪಿಯ ಸಂಕಲ್ಪ ಸೇವಾ ಅಭಿಯಾನ – vishwanews24

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ: ಸೆ.17ರಿಂದ ಬಿಜೆಪಿಯ ಸಂಕಲ್ಪ ಸೇವಾ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ…

52 minutes ago

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ವಿ ಸುನೀಲ್ ಕುಮಾರ್ ಆಗ್ರಹ – vishwanews24

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ವಿ ಸುನೀಲ್ ಕುಮಾರ್ ಆಗ್ರಹ ಬೆಂಗಳೂರು: ‘ಸೆಪ್ಟೆಂಬರ್…

2 hours ago

ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ – vishwanews24

ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ ಮಂಡ್ಯ: ಮೈಶುಗರ್‌ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ.…

2 hours ago

ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್‌ಗೆ KSRTC ಡಿಕ್ಕಿ ; ಬಸ್ ಚಾಲಕ ಸ್ಥಳದಲ್ಲೇ ಸಾವು – vishwanews24

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ  KSRTC ಚಾಲಕ ಸ್ಥಳದಲ್ಲೇ ಸಾವು - ಹಲವು ಪ್ರಯಾಣಿಕರಿಗೆ…

2 hours ago

ಸತೀಶ್​​ ಜಾರಕಿಹೊಳಿಗೆ ಇಡಿ ದಾಳಿ ರಾಜಕೀಯ ಪ್ರೇರಿತ ; ಅವರು ಯಾವುದೇ ತಪ್ಪು ಮಾಡಿಲ್ಲ : ಸಿಎಂ ಡಿಕೆಶಿ – vishwanews24

ಸತೀಶ್​​ ಜಾರಕಿಹೊಳಿ ಅವರ ಬೆಳವಣಿಗೆ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.. ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ?.. ಅವರ ಜೊತೆ…

4 hours ago