ಪುತ್ತೂರು, : ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಬಲ್ನಾಡು ಬ೦ಗಾರಡ್ಕ ದಿ.ಕಮಲಾಕ್ಷ ರ ಪುತ್ರಿ ವಂಶಿ ಬಿ.ಕೆ (17ವ) ಎಂದು ಗುರುತಿಸಲಾಗಿದೆ.
ಈಕೆ ಈಗಷ್ಟೇ ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ವ್ಯಾಸಂಗ ಮಾಡಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು. ಮೃತ ವಂಶಿ ಬಿ.ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದಿದ್ದರು. ವಿದ್ಯಾಭಾರತಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಇತ್ತೀಚೆಗೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ವಿದ್ಯಾರ್ಥಿನಿಯನ್ನು ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಬಳಿಕ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ತೀವ್ರ ಅಸ್ವಸ್ಥರಾಗಿದ್ದರು. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಬಿ.ಎಸ್ ಜಯಲತಾ ಮತ್ತು ಸಹೋದರನನ್ನು ಅಗಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…