ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆಯ ಪುತ್ತೂರು ಕಾಂಗ್ರೇಸ್ ಅಭ್ಯರ್ಥಿಯನ್ನಾಗಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರನ್ನು ಆಯ್ಕೆ ಮಾಡಬೇಕೆಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕ ಆಗ್ರಹಿಸಿದೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷ ಶಾರದಾ ಅರಸ್ ಶಕುಂತಲಾ ಶೆಟ್ಟಿ ಪುತ್ತೂರು ಶಾಸಕಿಯಾಗಿದ್ದ ಸಂದರ್ಭದಲ್ಲಿ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ಅನುದಾನದ ರೂಪದಲ್ಲಿ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ.
ಅಲ್ಲದೆ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಗುರಿ ಹೊಂದಿದ್ದ ಅವರು ಈಗಾಗಲೇ 40. ಎಕರೆ ಜಾಗವನ್ನು ಮೆಡಿಕಲ್ ಕಾಲೇಜಿಗೆಂದೇ ಮೀಸಲಿಟ್ಟಿದ್ದಾರೆ. ಈ ಬಾರಿ ಅವರಿಗೆ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿ ಅವರ ಬಾಕಿಯಾಗಿ ಉಳಿದ ಅವರ ಕನಸುಗಳನ್ನು ಸಾಕಾರ ಮಾಡಲು ಪಕ್ಷ ಅವಕಾಶವನ್ನು ನೀಡಬೇಕೆಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಮಹಿಳಾ ಪರ ಹೋರಾಟಗಾರರಾಗಿಯೂ ಗುರುತಿಸಿಕೊಂಡಿರುವ ಶಕುಂತಲಾ ಶೆಟ್ಟಿ ಅವರಿಗೇ ಈ ಬಾರಿ ಪಕ್ಷದ ಟಿಕೆಟ್ ನೀಡಬೇಕೆಂದು ಅವರು ಆಗ್ರಹಿಸಿದರು
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…