ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರು ಹೆಚ್ಚಿದ್ದಾರೆ. ಇಲ್ಲಿ ಈ ಹಿಂದೆ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳ ಜೊತೆಗೆ ಪಕ್ಷದ ಸಂಘಟನೆಯ ಕೆಲಸವನ್ನೂ ಮಾಡಿದ್ದಾರೆ. ಈ ಭಾರಿ ಅವರಿಗೆ ಮತ್ತೆ ಸ್ಪರ್ಧಿಸಲು ಪಕ್ಷವು ಅವಕಾಶ ನೀಡಬೇಕು.
ಅವಕಾಶ ನಿರಾಕರಿಸಿದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ನ ಎಲ್ಲಾ ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲಿದ್ದೇವೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಎಚ್ಚರಿಕೆ ನೀಡಿದ್ದಾರೆ.
ಅವರು ಪುತ್ತೂರು ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಈ ಹಿಂದೆಯೇ ಪಕ್ಷದ ಹೈಕಮಾಂಡ್ಗೆ ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ನೀಡುವಂತೆ ಮಾದ್ಯಮಗಳ ಮೂಲಕ ಮನವಿ ಮಾಡಿದ್ದೆವು. ಆದರೆ ಇದೀಗ ಪಕ್ಷವು ಬೇರೆಯವರಿಗೆ ಟಿಕೇಟ್ ನೀಡುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಶಕುಂತಳಾ ಶೆಟ್ಟಿ ಅವರು ಬಲಿಷ್ಠಗೊಳಿಸಿದ್ದಾರೆ. ಮಹಿಳೆಯರ ಏಳಿಗೆಗಾಗಿ ಅನೇಕ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಪಕ್ಷವು ಮಹಿಳೆಯರ ಕಡೆಗಣನೆ ಮಾಡುತ್ತಿರುವ ಸೂಚನೆ ಕಂಡು ಬರುತ್ತಿದೆ. ಅನುಭವಿ ರಾಜಕಾರಣಿಯಾಗಿರುವ ಶಕುಂತಳಾ ಶೆಟ್ಟಿ ಅವರು ಕೊನೆಯ ಬಾರಿಯಾಗಿ ಈ ಬಾರಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಮುಖಂಡರಾದ ವಿಶಾಲಾಕ್ಷಿ ಬನ್ನೂರು, ವಿಲ್ಮಾ ಗೋನ್ಸಾಲ್ವಿಸ್, ಸುಧಾ ಕುಂಜತ್ತಾಯ ಮತ್ತು ಸೀತಾ ಭಟ್ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…