Featured

ಪುತ್ತೂರು : ಶಕುಂತಳಾ ಶೆಟ್ಟಿಗೆ ಟಿಕೇಟ್ ನಿರಾಕರಿಸಿದರೆ ಸಾಮೂಹಿಕ ರಾಜೀನಾಮೆ: ಮಹಿಳಾ ಕಾಂಗ್ರೆಸ್ ಎಚ್ಚರಿಕೆ – Vishwanews24

ಪುತ್ತೂರು : ಶಕುಂತಳಾ ಶೆಟ್ಟಿಗೆ ಟಿಕೇಟ್ ನಿರಾಕರಿಸಿದರೆ ಸಾಮೂಹಿಕ ರಾಜೀನಾಮೆ: ಮಹಿಳಾ ಕಾಂಗ್ರೆಸ್ ಎಚ್ಚರಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರು ಹೆಚ್ಚಿದ್ದಾರೆ. ಇಲ್ಲಿ ಈ ಹಿಂದೆ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳ ಜೊತೆಗೆ ಪಕ್ಷದ ಸಂಘಟನೆಯ ಕೆಲಸವನ್ನೂ ಮಾಡಿದ್ದಾರೆ. ಈ ಭಾರಿ ಅವರಿಗೆ ಮತ್ತೆ ಸ್ಪರ್ಧಿಸಲು ಪಕ್ಷವು ಅವಕಾಶ ನೀಡಬೇಕು.

ಅವಕಾಶ ನಿರಾಕರಿಸಿದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್‍ನ ಎಲ್ಲಾ ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲಿದ್ದೇವೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಎಚ್ಚರಿಕೆ ನೀಡಿದ್ದಾರೆ.

ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಈ ಹಿಂದೆಯೇ ಪಕ್ಷದ ಹೈಕಮಾಂಡ್‍ಗೆ ಶಕುಂತಳಾ ಶೆಟ್ಟಿ ಅವರಿಗೆ ಅವಕಾಶ ನೀಡುವಂತೆ ಮಾದ್ಯಮಗಳ ಮೂಲಕ ಮನವಿ ಮಾಡಿದ್ದೆವು. ಆದರೆ ಇದೀಗ ಪಕ್ಷವು ಬೇರೆಯವರಿಗೆ ಟಿಕೇಟ್ ನೀಡುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.

ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಶಕುಂತಳಾ ಶೆಟ್ಟಿ ಅವರು ಬಲಿಷ್ಠಗೊಳಿಸಿದ್ದಾರೆ. ಮಹಿಳೆಯರ ಏಳಿಗೆಗಾಗಿ ಅನೇಕ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಪಕ್ಷವು ಮಹಿಳೆಯರ ಕಡೆಗಣನೆ ಮಾಡುತ್ತಿರುವ ಸೂಚನೆ ಕಂಡು ಬರುತ್ತಿದೆ. ಅನುಭವಿ ರಾಜಕಾರಣಿಯಾಗಿರುವ ಶಕುಂತಳಾ ಶೆಟ್ಟಿ ಅವರು ಕೊನೆಯ ಬಾರಿಯಾಗಿ ಈ ಬಾರಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಮುಖಂಡರಾದ ವಿಶಾಲಾಕ್ಷಿ ಬನ್ನೂರು, ವಿಲ್ಮಾ ಗೋನ್ಸಾಲ್ವಿಸ್, ಸುಧಾ ಕುಂಜತ್ತಾಯ ಮತ್ತು ಸೀತಾ ಭಟ್ ಉಪಸ್ಥಿತರಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

18 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

19 hours ago