ಪುತ್ತೂರು: ಪುತ್ತೂರು ಶಾಸಕರು ಮಹಿಳೆ ಜೊತೆ ಇರುವಂತಹ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಶಾಸಕರು ಜನತೆಗೆ ಸ್ಪಷ್ಟನೆ ನೀಡಬೇಕು ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ದಿನಗಳ ಹಿಂದೆ ಈ ಫೋಟೋಗಳು ವೈರಲ್ ಆಗಿದ್ದು,ಈ ಫೋಟೋವಿಗೂ, ಶಾಸಕರಿಗೂ ಇರುವ ಸಂಬಂಧವೇನು ಅನ್ನೋದನ್ನು ಶಾಸಕರು ಜನರಿಗೆ ತಳಿಸಬೇಕು.
ಮಾತೆತ್ತಿದರೆ ಮಹಿಳೆಯರನ್ನು ಮಾತೆ ಎನ್ನುವ ಬಿಜೆಪಿಗರ ಹಣೆಬರಹ ಎಂ.ಪಿ.ರೇಣುಕಾಚಾರ್ಯರಿಂದ ಹಿಡಿದು ಪುತ್ತೂರು ಶಾಸಕರ ವರೆಗಿನ ಫೋಟೋ ತನಕ ಬೀದಿಗೆ ಬಂದಿದೆ. ಈ ಫೋಟೋದ ಸತ್ಯಾಸತ್ಯತೆಯನ್ನು ಪೋಲೀಸರು ತನಿಖೆಯಲ್ಲಿ ಬಹಿರಂಗಪಡಿಸಬೇಕು.
ಶಾಸಕರೇ ತಮ್ಮ ಆಪ್ತರಲ್ಲಿ ಹೇಳಿಕೊಂಡಂತೆ ಈ ಫೋಟೋಗಳನ್ನು ಬಿಜೆಪಿಯಲ್ಲಿರುವ ಅವರ ರಾಜಕೀಯ ವಿರೋಧಿಗಳೇ ಮಾಡಿದ್ದು, ಓರ್ವ ಮಹಿಳೆಯನ್ನು ಅವಮಾನ ಮಾಡಿದ ಇಂಥಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…