Featured

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ತಳಭಾಗದಲ್ಲಿ ಬೃಹತ್ ಪಾಣಿಪೀಠ ಪತ್ತೆ – Vishwanews24

ಪುತ್ತೂರು ದೇವಳದಲ್ಲಿ ವಿಸ್ಮಯ: ಪುಷ್ಕರಣಿ ತಳಭಾಗದಲ್ಲಿ ಬೃಹತ್ ಪಾಣಿಪೀಠ ಪತ್ತೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಕೆಳಭಾಗದಲ್ಲಿ ವರುಣ ದೇವರ ವಿಗ್ರಹದ ಪಾಣಿಪೀಠದ ಕೆಳಗಡೆ ಮತ್ತೊಂದು ದೊಡ್ಡದಾದ ಪಾಣಿಪೀಠ ಕಂಡು ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.

ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಪುನರ್ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಕೆರೆಯ ಮಧ್ಯ ಭಾಗದ ಕಟ್ಟೆಯ ಸುತ್ತ ಕಾಫರ್ ಡ್ರಾಜ್ ಮಾಡಿ ಒಳಗಿನ ನೀರನ್ನು ಹೊರತೆಗೆದಾಗ ಶ್ರೀವರುಣ ದೇವರ ವಿಗ್ರಹದ ಪಾಣಿಪೀಠದ ಕೆಳಗಡೆ ಬೃಹತ್​ ಪಾಣಿಪೀಠ ಕಂಡುಬಂದಿದ್ದು, ಅದರ ಎದುರೇ ತಾಮ್ರದ ಸಣ್ಣ ಕರಡಿಗೆ ಕೂಡ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ದೇವಸ್ಥಾನದ ಪುಷ್ಕರಣಿ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ-ಬಿಳಿ ಮಿಶ್ರಿತ ಹುಡಿ ಮಣ್ಣಿನೊಂದಿಗೆ ಅಂಟಿಕೊಂಡಿದ್ದ ವರುಣ ದೇವರ ವಿಗ್ರಹದ ಪಾಣಿಪೀಠ ಕಂಡುಬಂದಿತ್ತು. ಇದೀಗ ಅದರ ಕೆಳಗೇ ಬೃಹತ್ ಪಾಣಿಪೀಠ ಪತ್ತೆಯಾಗಿದೆ.

ಇನ್ನು ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ನಿರ್ಮಾಣ ಸಂದರ್ಭದಲ್ಲೂ ದೇವಳದ ಒಳಾಂಗಣದಲ್ಲಿ ಶಿಲಾ ಶಾಸನಗಳು, ಕೆತ್ತನೆ ಶಿಲ್ಪಗಳು, ಗರ್ಭಗುಡಿಯಲ್ಲಿ ಪ್ರಭಾವಳಿ, ರಾಜರ ಕಾಲದ ನಾಣ್ಯಗಳು ಪತ್ತೆಯಾಗಿದ್ದವು.

12ನೇ ಶತಮಾನದಲ್ಲಿ ಮಹಾಲಿಂಗೇಶ್ವರ ದೇವರ ಪುಷ್ಕರಣಿ ರಚನೆಯಾಗಿದೆ ಎಂದು ಇತಿಹಾಸ ಹೇಳುತ್ತಿದ್ದು, ಅದರಂತೆ ಅದರ ಕಟ್ಟೆಯ ಪುನರ್‌ನಿರ್ಮಾಣ ಕಾರ್ಯ ನಡೆಯುತ್ತಿದೆ ಈ ಸಂದರ್ಭ ಆರಂಭದಲ್ಲಿ ವರುಣ ದೇವರ ವಿಗ್ರಹ ಪಾಣಿಪೀಠ ಗೋಚರ ಆಗಿತ್ತು ಬಳಿಕ ನೀಲಿ ಬಿಳಿ ಮಿಶ್ರಿತ ಹುಡಿ ಬೆಳಕಿಗೆ ಬಂದಿತ್ತು ಇದೀಗ ಒಂದು ಪಾಣಿಪೀಠದ ಅಡಿಯಲ್ಲಿ ಮತ್ತೊಂದು ದೊಡ್ಡ ಪಾಣಿಪೀಠ ಇರುವುದು ಬೆಳಕಿಗೆ ಬಂದಿದೆ.

ಮಗಾಲಿಂಗೇಶ್ವರ ದೇವಾಸ್ಥಾನದಲ್ಲಿ ಪ್ರತಿ ವರ್ಷ ಏಪ್ರಿಲ್ 10ರಿಂದ 18ರ ವರೆಗೆ ಜಾತ್ರಾ ಮಹೋತ್ಸವ ಜರಗುತ್ತಿದ್ದು, ಈ ಬಾರಿಯ ಜಾತ್ರೆಯ ಸಮಯಕ್ಕೆ ಪುಷ್ಕರಣಿ ಕೆಲಸ ಪೂರ್ಣಗೊಳಿಸುವ ಉದ್ದೇಶದಿಂದ ಪುನರ್ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago