Featured

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ತಳಭಾಗದಲ್ಲಿ ಬೃಹತ್ ಪಾಣಿಪೀಠ ಪತ್ತೆ – Vishwanews24

ಪುತ್ತೂರು ದೇವಳದಲ್ಲಿ ವಿಸ್ಮಯ: ಪುಷ್ಕರಣಿ ತಳಭಾಗದಲ್ಲಿ ಬೃಹತ್ ಪಾಣಿಪೀಠ ಪತ್ತೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಕೆಳಭಾಗದಲ್ಲಿ ವರುಣ ದೇವರ ವಿಗ್ರಹದ ಪಾಣಿಪೀಠದ ಕೆಳಗಡೆ ಮತ್ತೊಂದು ದೊಡ್ಡದಾದ ಪಾಣಿಪೀಠ ಕಂಡು ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.

ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಪುನರ್ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಕೆರೆಯ ಮಧ್ಯ ಭಾಗದ ಕಟ್ಟೆಯ ಸುತ್ತ ಕಾಫರ್ ಡ್ರಾಜ್ ಮಾಡಿ ಒಳಗಿನ ನೀರನ್ನು ಹೊರತೆಗೆದಾಗ ಶ್ರೀವರುಣ ದೇವರ ವಿಗ್ರಹದ ಪಾಣಿಪೀಠದ ಕೆಳಗಡೆ ಬೃಹತ್​ ಪಾಣಿಪೀಠ ಕಂಡುಬಂದಿದ್ದು, ಅದರ ಎದುರೇ ತಾಮ್ರದ ಸಣ್ಣ ಕರಡಿಗೆ ಕೂಡ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ದೇವಸ್ಥಾನದ ಪುಷ್ಕರಣಿ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ-ಬಿಳಿ ಮಿಶ್ರಿತ ಹುಡಿ ಮಣ್ಣಿನೊಂದಿಗೆ ಅಂಟಿಕೊಂಡಿದ್ದ ವರುಣ ದೇವರ ವಿಗ್ರಹದ ಪಾಣಿಪೀಠ ಕಂಡುಬಂದಿತ್ತು. ಇದೀಗ ಅದರ ಕೆಳಗೇ ಬೃಹತ್ ಪಾಣಿಪೀಠ ಪತ್ತೆಯಾಗಿದೆ.

ಇನ್ನು ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ನಿರ್ಮಾಣ ಸಂದರ್ಭದಲ್ಲೂ ದೇವಳದ ಒಳಾಂಗಣದಲ್ಲಿ ಶಿಲಾ ಶಾಸನಗಳು, ಕೆತ್ತನೆ ಶಿಲ್ಪಗಳು, ಗರ್ಭಗುಡಿಯಲ್ಲಿ ಪ್ರಭಾವಳಿ, ರಾಜರ ಕಾಲದ ನಾಣ್ಯಗಳು ಪತ್ತೆಯಾಗಿದ್ದವು.

12ನೇ ಶತಮಾನದಲ್ಲಿ ಮಹಾಲಿಂಗೇಶ್ವರ ದೇವರ ಪುಷ್ಕರಣಿ ರಚನೆಯಾಗಿದೆ ಎಂದು ಇತಿಹಾಸ ಹೇಳುತ್ತಿದ್ದು, ಅದರಂತೆ ಅದರ ಕಟ್ಟೆಯ ಪುನರ್‌ನಿರ್ಮಾಣ ಕಾರ್ಯ ನಡೆಯುತ್ತಿದೆ ಈ ಸಂದರ್ಭ ಆರಂಭದಲ್ಲಿ ವರುಣ ದೇವರ ವಿಗ್ರಹ ಪಾಣಿಪೀಠ ಗೋಚರ ಆಗಿತ್ತು ಬಳಿಕ ನೀಲಿ ಬಿಳಿ ಮಿಶ್ರಿತ ಹುಡಿ ಬೆಳಕಿಗೆ ಬಂದಿತ್ತು ಇದೀಗ ಒಂದು ಪಾಣಿಪೀಠದ ಅಡಿಯಲ್ಲಿ ಮತ್ತೊಂದು ದೊಡ್ಡ ಪಾಣಿಪೀಠ ಇರುವುದು ಬೆಳಕಿಗೆ ಬಂದಿದೆ.

ಮಗಾಲಿಂಗೇಶ್ವರ ದೇವಾಸ್ಥಾನದಲ್ಲಿ ಪ್ರತಿ ವರ್ಷ ಏಪ್ರಿಲ್ 10ರಿಂದ 18ರ ವರೆಗೆ ಜಾತ್ರಾ ಮಹೋತ್ಸವ ಜರಗುತ್ತಿದ್ದು, ಈ ಬಾರಿಯ ಜಾತ್ರೆಯ ಸಮಯಕ್ಕೆ ಪುಷ್ಕರಣಿ ಕೆಲಸ ಪೂರ್ಣಗೊಳಿಸುವ ಉದ್ದೇಶದಿಂದ ಪುನರ್ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago