ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ, ಶ್ವಾನಪ್ರಿಯ ಗಣೇಶ್ ಕೇರ ಎಂಬವರ ನಾಪತ್ತೆಯಾಗಿದ್ದ ಸಾಕುನಾಯಿಯನ್ನು ಪತ್ತೆಹಚ್ಚಿ ಒಪ್ಪಿಸಿದ ಸ್ಥಳೀಯ ನಿವಾಸಿ ಪುರಂದರ ಅವರಿಗೆ ಘೋಷಿತ 50 ಸಾವಿರ ರೂ. ಬಹುಮಾನದ ಚೆಕ್ ಅನ್ನು ಹಸ್ತಾಂತರಿಸಲಾಗಿದೆ.
ಕೆಲವು ದಿನಗಳ ಹಿಂದೆ ಗಣೇಶ್ ಅವರ “ಚಿನ್ನು’ ಹೆಸರಿನ ದೇಶಿ ತಳಿಯ ನಾಯಿ ನಾಪತ್ತೆಯಾಗಿತ್ತು. ಹಿಂದೆ ರಸ್ತೆ ಬದಿಯಲ್ಲಿ ಸಿಕ್ಕಿದ್ದ ಈ ನಾಯಿಯನ್ನು ತಂದು ಅವರು ಪ್ರೀತಿಯಿಂದ ಸಾಕಿದ್ದರು. ಒಮ್ಮೆ ಪಿಟ್ಸ್ ಕಾಯಿಲೆಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಲಾಗಿತ್ತು. ಆದರೆ, ಇತ್ತೀಚೆಗೆ ಇದು ನಾಪತ್ತೆಯಾದಾಗ, ಹುಡುಕಿಕೊಟ್ಟವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ಗಣೇಶ್ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಬ್ಯಾನರ್ಗಳ ಮೂಲಕ ಪ್ರಕಟಿಸಿದ್ದರು.
ಮನೆಯಿಂದ ಕೇವಲ 2 ಕಿ.ಮೀ ಸುತ್ತಳತೆಯಲ್ಲೇ ತಿರುಗಾಡುತ್ತಿದ್ದ ನಾಯಿ, ಹುಡುಕಾಡಿದರೂ ಮಾಲಕರಿಗೆ ಸಿಕ್ಕಿರಲಿಲ್ಲ. ನಾಪತ್ತೆಯಾದ ಮೂರು ದಿನಗಳ ಬಳಿಕ ಪುರಂದರ ಅವರು ಇದನ್ನು ಮೊದಲ ಬಾರಿಗೆ ಗುರುತಿಸಿ ಮಾಹಿತಿ ನೀಡಿದ್ದರಾದರೂ ಮಾಲಕರು ಸ್ಥಳಕ್ಕೆ ತಲುಪುವಷ್ಟರಲ್ಲಿ ನಾಯಿ ಅಲ್ಲಿಂದ ಮಾಯವಾಗಿತ್ತು. ಆದರೆ, ಕಳೆದ ಎರಡು ದಿನಗಳ ಹಿಂದೆ ನಾಯಿ ಮತ್ತೆ ಪುರಂದರ ಅವರ ಕಣ್ಣಿಗೆ ಬಿದ್ದಾಗ, ತತ್ಕ್ಷಣ ಅದನ್ನು ಹಿಡಿದು ಗಣೇಶ್ ಅವರಿಗೆ ಒಪ್ಪಿಸಿದ್ದಾರೆ.
ತಮ್ಮ ಸಾಕುನಾಯಿ ಸಿಕ್ಕ ಖುಷಿಯಲ್ಲಿ ಗಣೇಶ್ ಅವರು ಪುರಂದರ ಅವರನ್ನು ಮನೆಗೆ ಕರೆಸಿ 50 ಸಾವಿರ ರೂ.ಗಳ ಚೆಕ್ ವಿತರಿಸಿದ್ದಾರೆ. ಗಣೇಶ್ ಅವರು ತಮ್ಮ ಮನೆಯಲ್ಲಿ ವಿವಿಧ ತಳಿಗಳ ಸುಮಾರು 30 ನಾಯಿಗಳನ್ನು ಸಾಕಿದ್ದಾರೆ.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…