ಪುತ್ತೂರು: ವ್ಯವಹಾರಕ್ಕೆ ಪಡೆದ ಬ್ಯಾಂಕ್ ಸಾಲ ಬಾಕಿ ಇರಿಸಿದ್ದು, ಮರುಪಾವತಿಗಾಗಿ ಮನೆಗೆ ಹೋದ ಬ್ಯಾಂಕ್ ಸಿಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿದ ಆರೋಪದಡಿ ಇಬ್ಬರ ಮೇಲೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪುತ್ತೂರು ಕೋರ್ಟ್ ರೋಡ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ರಿಲೇಷನ್ಶಿಪ್ ಮ್ಯಾನೇಜರ್ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಎಚ್.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ.
ಬಲ್ನಾಡು ಗ್ರಾಮದ ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್ಬಿಐ ಬ್ಯಾಂಕ್ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು ಬಾರಿ ವಕೀಲರ ಮುಖಾಂತರ ಲೀಗಲ್ ನೋಟಿಸ್ ಮಾಡಿದ್ದರೂ, ತಿಳಿಸಿ ಹೇಳಿದ್ದರೂ ಸಾಲ ಮರುಪಾವತಿ ಮಾಡಿರಲಿಲ್ಲ ಎನ್ನಲಾಗಿದೆ.
ಈ ಬಗ್ಗೆ ಮೇಲಾಧಿಕಾರಿಗಳ ಮೌಖೀಕ ಆದೇಶದಂತೆ ಬ್ಯಾಂಕ್ ಸಿಬಂದಿ ಆಕಾಶ್ ಚಂದ್ರಬಾಬು ಮತ್ತು ದಿವ್ಯಶ್ರೀ ಅವರು ಅಖಿಲೇಶ್ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಅಖೀಲೇಶ್ ಅವರು ಮನೆಯಲ್ಲಿರಲಿಲ್ಲ. ಬ್ಯಾಂಕ್ನವರು ಬಂದ ವಿಚಾರವನ್ನು ಕೀರ್ತಿ ಅವರು ಪತಿ ಅಖೀಲೇಶ್ಗೆ ಕರೆ ಮಾಡಿ ತಿಳಿಸಿದ್ದರು.
ಅಖಿಲೇಶ್ ಅವರು ಮನೆಗೆ ಬಂದು ಬ್ಯಾಂಕ್ ಸಿಬಂದಿ ಜತೆಗೆ ಮನೆಗೆ ಬಂದಿರುವ ಬಗ್ಗೆ ತಕರಾರು ತೆಗೆದು ಗದರಿಸಿರುವುದು ಮಾತ್ರವಲ್ಲದೇ, ತಂದೆ ಬರುವ ತನಕ ಕೂರುವಂತೆ ಮನೆಯ ಬಾಗಿಲು ಬಂದ್ ಮಾಡಿ ಬಲವಂತವಾಗಿ ಕೂರಿಸಿದ್ದಾರೆ. ಬಳಿಕ ಕೃಷ್ಣ ಕಿಶೋರ್ ಅವರು ಮನೆಗೆ ಬಂದು ದೂರುದಾರರಲ್ಲಿ ಮನೆಗೆ ಬಂದ ಬಗ್ಗೆ ತಕರಾರು ತೆಗೆದು, ಗದರಿಸಿ ಪಿಸ್ತೂಲ್ ತೋರಿಸಿ ಶೂಟ್ ಮಾಡುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಗುರುವಾರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…