Featured

ಪುತ್ತೂರು: ಸಿಸೇರಿಯನ್ ಹೆರಿಗೆ ಬಳಿಕ ಹೊಟ್ಟೆಯೊಳಗೆ ಬಟ್ಟೆಯ ತುಂಡು ಆರೋಪ ; ತನಿಖೆ ಆರಂಭ – vishwanews24

ಪುತ್ತೂರು: ಸಿಸೇರಿಯನ್ ಹೆರಿಗೆ ಬಳಿಕ ಹೊಟ್ಟೆಯೊಳಗೆ ಬಟ್ಟೆಯ ತುಂಡು ಆರೋಪ – ತನಿಖೆ ಆರಂಭ

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಬಳಿಕ ಮಹಿಳೆಯ ಹೊಟ್ಟೆಯೊಳಗೆ ಬ್ಯಾಂಡೆಜಿನ ಬಟ್ಟೆಯ ತುಂಡನ್ನು ಗರ್ಭಿಣಿ ಮಹಿಳೆಯ ಉದರದಲ್ಲೇ ಬಿಟ್ಟು ಹೊಲಿಗೆ ಹಾಕಿದ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಲು ಆರು ಅಧಿಕಾರಿಗಳು ಮತ್ತು ವೈದ್ಯರ ತಂಡ ಫೆ.24ರಂದು ಪುತ್ತೂರಿಗೆ ಭೇಟಿ ನೀಡಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು. ಒಂದು ವಾರದಲ್ಲಿ ವಿಚಾರಣೆ ನಡೆಸಿ ಅಗತ್ಯ ಕ್ರಮಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ವರದಿ ಸಲ್ಲಿಸಲಿದೆ.

ಘಟನೆ ನಡೆದ ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ವಿಚಾರಿಸಿದೆವು.ಆಸ್ಪತ್ರೆಯಿಂದಲೂ ಮಾಹಿತಿ ಸಂಗ್ರಹಿಸಿದೆವು. ಹೆಚ್ಚುವರಿಯಾಗಿ ಮತ್ತೊಂದು ಆಸ್ಪತ್ರೆಗೆ ಭೇಟಿ ನೀಡಿ ಸ್ಕ್ಯಾನ್ ಪತ್ತೆ ಹಚ್ಚಿದ ಬಳಿಕ ಗೋಜಲು ತೆಗೆದಿದ್ದು, ಮಂಗಳವಾರವೂ ತನಿಖೆ ಮುಂದುವರಿಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಪತ್ರಿಕೆಗೆ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 27 ರಂದು ಗಗನ್‌ದೀಪ್ ಅವರ ಪತ್ನಿ ಶರಣ್ಯ ಲಕ್ಷ್ಮಿ ಹೆರಿಗೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ನಡೆಸಿದ ಆಫರೇಷನ್ ಸಂದರ್ಭದಲ್ಲಿ ಬ್ಯಾಂಡೇಜಿನ ಬಟ್ಟೆ ಹೊಟ್ಟೆಯಲ್ಲೇ ಉಳಿದುಕೊಂಡಿತ್ತು. ಡಿ. 2ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಕೆಲವು ದಿನಗಳಲ್ಲಿ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಈ ಸಂಬಂಧ ಸ್ಕ್ಯಾ ನ್ ಮಾಡಿದಾಗ ಬಟ್ಟೆ ಹೊಟ್ಟೆಯಲ್ಲೇ ಉಳಿದುಕೊಂಡಿರುವುದು ಬೆಳಕಿಗೆ ಬಂದಿತ್ತು. ಬೇರೊಂದು ಆಸ್ಪತ್ರೆಯಲ್ಲಿ ಅದನ್ನು ಹೊರ ತೆಗೆಯಲಾಯಿತು ಎಂದು ಶರಣ್ಯ ಅವರ ಪತಿ ಗಗನ್‌ದೀಪ್‌ ಆರೋಪಿಸಿದ್ದರು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

48 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

1 hour ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

2 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

2 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

2 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

2 hours ago