ಪುತ್ತೂರು : ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ನಿಷೇದಾಜ್ಙೆ ಜಾರಿಗೊಳಿಸಲಾಗಿದೆ.
ಉಪ್ಪಿನಂಗಡಿಯಲ್ಲಿ ಡಿ 14 ರಂದು ರಾತ್ರಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ದಲಾಯಿಸಿ ಪುತ್ತೂರು ಉಪವಿಭಾಗಾಯಾದ್ಯಂತ ಅಂದರೆ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ದಿನಾಂಕ:15/12/2021 ರಿಂದ ದಿನಾಂಕ:17/12/2011 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸುತ್ತೇನೆ ಎಂದು ಸಹಾಯಕ ಆಯುಕ್ತರು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.
ಏನಿದೆ ಆದೇಶದಲ್ಲಿ ?
ಈ ಅವಧಿಯಲ್ಲಿ ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ,ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ, ಮತ್ತು ಸರಕಾರಿ ಕಛೇರಿ ಸುತ್ತಮುತ್ತು ಗುಂಪು ಸೇರಬಾರದು ಅಥವಾ ಗುಂಪು ಸೇರುವುದನ್ನು ನಿಷೇದಿಸಿದೆ.
ಯಾವುದೇ ಆಯುಧ, ಕೊಡುಗೋಲು,ಖರ ಭರ್ಚಿ,ಗದೆ, ಕೋಲು,ಚೂರಿ ದೊಡ್ಡ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
ಯಾವುದೇ ಸಾರ್ವಜನಿಕ ಮೇರವಣಿಗೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು.
ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
ಸಾರ್ವಜನಿಕ ಕೋಮು ಸೌಹರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು ಬೇಷ್ಠ ಮಾಡುವುದು , ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ಥಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅವರಾಧ ಎಸಗುವ ಮತ್ತು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಿದೆ.
ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 152/2021 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ಸೀನಾನ್ ಎಂಬಾತನನ್ನು ಉಪ್ಪಿನಂಗಡಿ ಎಸ್ ಐ ಕುಮಾರ್ ಕಾಂಬ್ಲೆ ಇವರು ಡಿ 13 ರಂದು ರಾತ್ರಿ ಬಂಧಿಸಿದ್ದರು. ಇದನ್ನು ವಿರೋಧಿಸಿ ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು ತಾಲೂಕಿನಾದ್ಯಂತದ, ಕಡಬ ತಾಲೂಕು ವ್ಯಾಪ್ತಿಯಾದ್ಯಂತದ ಬೆಳ್ಳಾರೆ,ಸವಣೂರು, ಬೆಳ್ತಂಗಡಿ, ಬಂಟ್ವಾಳ ,ಸುಳ್ಯ ತಾಲೂಕು ವ್ಯಾಪ್ತಿಯ ಹಲವಾರು ಪಿಎಫ್ಐ ಸಂಘಟನೆಯ ಕಾರ್ಯಕರ್ತರುಗಳು ಉಪ್ಪಿನಂಗಡಿ ಠಾಣೆಯ ಮುಂಭಾಗ ಅಕ್ರಮಕೂಟ ಸೇರಿ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ ಕಾನೂನನ್ನು ಕೈಗೆತ್ತಿಕೊಳ್ಳುವ ಸನ್ನಿವೇಶ ಸೃಷ್ಟಿಸಿದ್ದಾರೆ.
ಅಲ್ಲದೇ ಪಿಎಫ್ ಐ ಸಂಘಟನೆಯವರು ಠಾಣೆಯ ಒಳಗಡೆ ಧಾವಿಸಲು ಪ್ರಯತ್ನಿಸುತ್ತಾ ವಿಚಾರಣೆಗೆ ಕರೆತಂದವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಉದ್ರೇಕಕಾರಿ ವರ್ತನೆ ತೋರಿದ್ದಾರೆ ಆದೇಶದಲ್ಲಿ ತಿಳಿಸಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…