Featured

ಪುತ್ತೂರು : ಸೂತ್ರಬೆಟ್ಟು ವಿಶ್ವನಾಥ ರೈ ಕೊಲೆ ಪ್ರಕರಣ : ಅಪರಾಧಿ ವಿಶ್ವನಾಥ ಶೆಟ್ಟಿಗೆ ಜೀವಾವಧಿ ಶಿಕ್ಷೆ – VIshwanews24

ಪುತ್ತೂರು : ಸೂತ್ರಬೆಟ್ಟು ವಿಶ್ವನಾಥ ರೈ ಕೊಲೆ ಪ್ರಕರಣ : ಅಪರಾಧಿ ವಿಶ್ವನಾಥ ಶೆಟ್ಟಿಗೆ ಜೀವಾವಧಿ ಶಿಕ್ಷೆ – VIshwanews24

ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ..

ಪುತ್ತೂರು: 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಬುಧವಾರ ಶಿಕ್ಷೆಯ ಸ್ವರೂಪ ಪ್ರಕಟಿಸಿದೆ.

ಉಪ್ಪಿನಂಗಡಿ ಶಿವ ಫೈನಾನ್ಸ್‌ನ ಮಾಲೀಕರಾಗಿದ್ದ, ಪುತ್ತೂರು ಮೂಲದ ಸೂತ್ರಬೆಟ್ಟು ವಿಶ್ವನಾಥ ರೈ ಅವರನ್ನು ಕೊಲೆ ಮಾಡಿದ ಪ್ರಕರಣದ ಅಪರಾಧಿ, ಕೋಡಿಂಬಾಡಿ ಅಂತರ ನಿವಾಸಿ ವಿಶ್ವನಾಥ ಶೆಟ್ಟಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

ಕೊಲೆ ಅಪರಾಧಕ್ಕೆ ಸಂಬಂಧಿಸಿದಂತೆ ಐಪಿಸಿ 302 ಕಲಂ ಪ್ರಕಾರ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಸಾಕ್ಷಿ ನಾಶ ಮಾಡಿದ ಅಪರಾಧಕ್ಕೆ ಐಪಿಸಿ 201 ಕಲಂ ಪ್ರಕಾರ ಐದು ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದಲ್ಲಿ 8 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

ಕೊಲೆ ಬೆದರಿಕೆ ಅಪರಾಧಕ್ಕೆ ಐಪಿಸಿ 506 ಕಲಂ ಪ್ರಕಾರ ಮೂರು ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ ಮತ್ತು ದಂಡ ತೆರಲು ತಪ್ಪಿದಲ್ಲಿ 6 ತಿಂಗಳು ಹೆಚ್ಚುವರಿ ಕಾರಾಗೃಹ ವಾಸ ಶಿಕ್ಷೆ ವಿಧಿಸಲಾಗಿದೆ. ವಿಶ್ವನಾಥ ಶೆಟ್ಟಿಯನ್ನು ಅಪರಾಧಿ ಎಂದು ನ್ಯಾಯಾಲಯ ಡಿಸೆಂಬರ್ 13 ರಂದು ಘೋಷಿಸಿದ್ದು, ಬುಧವಾರ ಶಿಕ್ಷೆಯ ಸ್ವರೂಪ ಪ್ರಕಟಿಸಿದೆ.

ಪ್ರಕರಣದ ಹಿನ್ನೆಲೆ: ಉಪ್ಪಿನಂಗಡಿಯಲ್ಲಿ ಫೈನಾನ್ಸ್‌ ವ್ಯವಹಾರ ಮಾಡುತ್ತಿದ್ದ ಪುತ್ತೂರು ಸೂತ್ರಬೆಟ್ಟು ನಿವಾಸಿ ವಿಶ್ವನಾಥ ರೈ ಅವರನ್ನು 2001ರ ಜೂನ್ 7 ರಂದು ರಾತ್ರಿ ಉಪ್ಪಿನಂಗಡಿಯ ಮನೆಯಲ್ಲಿ ತಲೆಗೆ ಹೊಡೆದು ಕೊಲೆ ಮಾಡಲಾಗಿತ್ತು. ಫೈನಾನ್ಸ್‌ನಲ್ಲಿ ಜತೆಯಾಗಿ ಕೆಲಸ ಮಾಡುತ್ತಿದ್ದ, ಅವರ ಆತ್ಮೀಯ ಗೆಳೆಯನೇ ಆಗಿದ್ದ ವಿಶ್ವನಾಥ ಶೆಟ್ಟಿ ಈ ಕೃತ್ಯದ ಆರೋಪಿಯಾಗಿದ್ದು, ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ ಶಿಕ್ಷೆ ಪ್ರಕಟಿಸಿದೆ.

ಬೆರಳತುದಿಯಲ್ಲಿ ನಿಮ್ಮೂರಿನ ಸುದ್ದಿ ತಿಳಿಬೇಕಾ ಈ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ

https://chat.whatsapp.com/IwXUKmFsohEASDGXAAjTTR

ಸೂತ್ರಬೆಟ್ಟು ವಿಶ್ವನಾಥ ರೈ ಮತ್ತು ಕೋಡಿಂಬಾಡಿ ವಿಶ್ವನಾಥ ಶೆಟ್ಟಿ ಗೆಳೆಯರಾಗಿದ್ದು, ಜತೆಯಾಗಿ ಹಣಕಾಸು ವಹಿವಾಟು ನಡೆಸುತ್ತಿದ್ದರು. ಒಂದು ಹಂತದಲ್ಲಿ ಇವರಿಬ್ಬರ ಮಧ್ಯೆ ವೈಷಮ್ಯ ಮೂಡಿದ್ದು, ಇದೇ ಕಾರಣದಿಂದ ಕೊಲೆ ನಡೆದಿತ್ತು. ಶವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಸಮೀಪದ ಮೂಡ್ಕಾಣಿ ಎಂಬಲ್ಲಿ ಸುಮಾರು 20 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿತ್ತು. ಶವದ ಅಂಗಿಯಲ್ಲಿದ್ದ ಪುತ್ತೂರು ಸಿಂಧು ಟೈಲರ್‌ ಎಂಬ ಸ್ಟಿಕ್ಕರ್‌ನ ಆಧಾರದಲ್ಲಿ ಪೊಲೀಸರು ಟೈಲರನ್ನು ಕರೆದೊಯ್ದು ಪರಿಶೀಲಿಸಿದಾಗ ಶವ ವಿಶ್ವನಾಥ ರೈ ಅವರದ್ದೆಂಬುದು ಖಚಿತವಾಗಿತ್ತು.

ಕೊಲೆ ಮಾಡಿದ ಬಳಿಕ ಆರೋಪಿ ತನ್ನ ಕಾರಿನಲ್ಲಿ ಶವವನ್ನು ಕೊಂಡೊಯ್ದು ಮೂಡ್ಕಾಣಿಯಲ್ಲಿ ಬಿಸಾಡಿ ಅದೇ ಕಾರಿನಲ್ಲಿ ಮರಳಿದ್ದಲ್ಲದೆ, ಮಂಗಳೂರಿನ ಕದ್ರಿಯಲ್ಲಿ ಕಾರನ್ನು ಬಿಟ್ಟು ನಾಪತ್ತೆಯಾಗಿದ್ದ. ಕೆಲ ದಿನಗಳ ಬಳಿಕ ಪೊಲೀಸರು ಕಾರನ್ನು ಪತ್ತೆ ಹಚ್ಚಿದ್ದರು. ಕಾರಿನಲ್ಲಿ ರಕ್ತದ ಕಲೆ ಇತ್ತಾದರೂ ಪ್ರಕರಣದ ಒಳ ಹೂರಣ ಬಯಲಾಗಿರಲಿಲ್ಲ.

ವಿಶ್ವನಾಥ ರೈ ಕೊಲೆಯಾದ ಬಳಿಕ ವಿಶ್ವನಾಥ ಶೆಟ್ಟಿ ನಾಪತ್ತೆಯಾಗಿದ್ದು ನಿಗೂಢತೆ ಸೃಷ್ಟಿಸಿತ್ತು. ಕೆಲ ಸಮಯದ ಬಳಿಕ ಅದೇ ಫೈನಾನ್ಸ್ ಸಿಬ್ಬಂದಿ ಬೆಳ್ತಂಗಡಿ ಮೂಲದ ಸುಭಾಶ್ಚಂದ್ರ ಗೌಡ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ಪೂರ್ಣ ಮಾಹಿತಿ ನೀಡಿದ್ದಲ್ಲದೆ, ವಿಶ್ವನಾಥ ರೈ ಅವರನ್ನು ವಿಶ್ವನಾಥ ಶೆಟ್ಟಿ ಕೊಲೆ ಮಾಡಿದ್ದಾರೆ. ವಿಷಯ ಯಾರಿಗಾದರೂ ಹೇಳಿದರೆ ನಿನ್ನನ್ನೂ ಕೊಲ್ಲುತ್ತೇನೆಂದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಕೊಲೆಯಾದ ಬಳಿಕ ಶವವನ್ನು ಕಾರಿನಲ್ಲಿ ತುಂಬಿಸಲು ಸಹಕರಿಸಿದ ಆರೋಪದಲ್ಲಿ ಸುಭಾಶ್ಚಂದ್ರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. 13 ವರ್ಷಗಳ ಬಳಿಕ ಅಂದರೆ, 2014ರ ಆಗಸ್ಟ್ 11ರಂದು ಆರೋಪಿ ವಿಶ್ಚನಾಥ ಶೆಟ್ಟಿಯನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿ, ನ್ಯಾಯಾಲಯದಲ್ಲಿ ಚಾರ್ಜ್‌ ಶೀಚ್‌ ಸಲ್ಲಿಸಿದ್ದರು. ವಿಚಾರಣೆ ವೇಳೆ ಸುಭಾಶ್ಚಂದ್ರ ಗೌಡ ಮಾಫಿ ಸಾಕ್ಷಿಯಾಗಿ ಬದಲಾಗಿದ್ದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago