ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ.
ಮಾಡಾವು ಕಟ್ಟತ್ತಾರು ನಿವಾಸಿ ಹಂಝರ ಪುತ್ರ ತಸ್ಲೀಮ್ (17) ಸುಳ್ಯದ ಅರಂತೋಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ.
ಅ. 15ರಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ತಸ್ಲೀಮ್ ನಾಪತ್ತೆಯಾಗಿದ್ದ.
ತಸ್ಲೀಮ್ ನಾಪತ್ತೆಯಾಗುತ್ತಿದ್ದಂತೆ ಉಳಿದ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.
ತಕ್ಷಣ ಸ್ಥಳೀಯರು, ಮುಳುಗು ತಜ್ಞರು ಬಂದು ಹುಡುಕಾಟ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.
ಸೋಮವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಸನಿಹವೇ ತಸ್ಲೀಮ್ ಮೃತದೇಹ ಪತ್ತೆಯಾಗಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…