ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ.
ಮಾಡಾವು ಕಟ್ಟತ್ತಾರು ನಿವಾಸಿ ಹಂಝರ ಪುತ್ರ ತಸ್ಲೀಮ್ (17) ಸುಳ್ಯದ ಅರಂತೋಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ.
ಅ. 15ರಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ತಸ್ಲೀಮ್ ನಾಪತ್ತೆಯಾಗಿದ್ದ.
ತಸ್ಲೀಮ್ ನಾಪತ್ತೆಯಾಗುತ್ತಿದ್ದಂತೆ ಉಳಿದ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.
ತಕ್ಷಣ ಸ್ಥಳೀಯರು, ಮುಳುಗು ತಜ್ಞರು ಬಂದು ಹುಡುಕಾಟ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.
ಸೋಮವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಸನಿಹವೇ ತಸ್ಲೀಮ್ ಮೃತದೇಹ ಪತ್ತೆಯಾಗಿದೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…