Featured

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ದೌರ್ಜನ್ಯ ಪ್ರಕರಣ – ನನ್ನ ಕ್ಷೇತ್ರದಲ್ಲಿ ಆಗಿರುವ ಘಟನೆಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ : ಅಶೋಕ್ ರೈ – Vishwanews24

ಹರೀಶ್‌ ಪೂಂಜರವರು ಪುತ್ತೂರಿಗೆ ಬಂದು ಈ ವಿಚಾರದಲ್ಲಿ ಮತನಾಡುವ ಅಗತ್ಯವಿಲ್ಲ ..

ಪೊಲೀಸರಿಗೆ ಒತ್ತಡ ಹಾಕಿದವರ ವಿವರ 2 ದಿನಗಳಲ್ಲಿ ಬಹಿರಂಗ ..

ಪುತ್ತೂರು: ಬಿಜೆಪಿ ನಾಯಕರ ಫೋಟೋ ಹೊಂದಿದ್ದ ಬ್ಯಾನರ್’ಗೆ ಚಪ್ಪಲಿ ಹಾರ, ಶ್ರದ್ದಾಂಜಲಿ ಕೋರಿದ್ದ ಬ್ಯಾನರ್ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬೆಳ್ತಂಗಡಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ನನ್ನ ಕ್ಷೇತ್ರದಲ್ಲಿ ನಡೆದಿರುವ ವಿವಾದದ ಬಗ್ಗೆ ನಾನೇ ನೋಡಿಕೊಳ್ಳುತ್ತೇನೆ ಎಂದಿದ್ದಾರೆ.

ಬ್ಯಾನರ್’ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ ಎಂದು ಈಗಾಗಲೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಮತ್ತೊಂದೆಡೆ ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆಸ್ಸಿನವರೇ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಆರೋಪಿಸಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಆರೋಪಕ್ಕೆ ಖಾರವಾಗಿಯೇ ಶಾಸಕ ಅಶೋಕ್ ರೈ ಉತ್ತರಿಸಿದ್ದಾರೆ. ನನ್ನ ಕ್ಷೇತ್ರದಲ್ಲಿ ಅನ್ಯಾಯವಾದವರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪ್ರಕರಣದ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಿ ಅಮಾನತು ಮಾಡುವಂತೆ ಸೂಚಿಸಿದ್ದೆ ಅದರಂತೆ ತನಿಖೆ ನಡೆಸಿ ತಪ್ಪತಸ್ಥರ ವಿರುದ್ದ ಕ್ರಮ ಜರುಗಿಸಲಾಗಿದೆ ಎಂದರು.

ಅಧಿಕಾರಿಗಳ ಮೇಲೆ ಒತ್ತಡ ಹಾಕಿದವರ ಕಾಲ್ ಲಿಸ್ಟ್ ತೆಗೆದು ಅದನ್ನು ಎರಡು ದಿನದೊಳಗೆ ಬಹಿರಂಗಪಡಿಸುವೆ ಆವಾಗ ಪುತ್ತೂರಿನ ಜನತೆಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜರವರು ಪುತ್ತೂರಿಗೆ ಬಂದು ಈ ವಿಚಾರದಲ್ಲಿ ಮತನಾಡುವ ಅಗತ್ಯವಿಲ್ಲ. ನನ್ನ ಕ್ಷೇತ್ರದಲ್ಲಿ ಆಗಿರುವ ಘಟನೆಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ ಎಂದು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago