Featured

ಪುತ್ತೂರು ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯೆ ಪ್ರಕರಣ : ಮೂವರ ಬಂಧನ -Vishwanews24

ಪುತ್ತೂರು: ಸೆ.3 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪ್ಯ ಎಂಬಲ್ಲಿ ನಡೆದ ಅರ್ಯಾಪು ಮೇರ್ಲ ನಿವಾಸಿ ,ಪುತ್ತೂರು ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲೂಕು ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಅವರ ಕೊಲೆ ನಡೆದಿದ್ದು ಸಂಬಂಧಿಸಿದಂತೆ ಪೋಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಪ್ಯ ಠಾಣೆಯ ಮುಂಭಾಗದಲ್ಲಿ ಗಣೇಶೋತ್ಸವ ಪೆಂಡಲ್ ಎದುರಲ್ಲೇ ಮಧ್ಯಾರಾತ್ರಿ ಯಕ್ಷಗಾನ ನಡೆಯುತಿದ್ದು ಸಾರ್ವಜನಿಕರ ಎದುರೇ ಕಾರ್ತಿಕ್ ಗೆ ಚೂರಿ ಇರಿದು ಕೊಲೆ ಮಾಡಲಾಗಿತ್ತು.

ಕೊಲೆ ನಡೆಸಿದ ಪ್ರಮುಖ ಆರೋಪಿ,ಉಳ್ಳಾಲ ಠಾಣೆಯಲ್ಲಿ ರೌಡಿ ಶೀಟರ್ ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ (28 ವರ್ಷ), ಪುತ್ತೂರು ಆರ್ಯಾಪು ಗ್ರಾಮದ ಚರಣ್‌ (26 ವರ್ಷ), ಈತನ ಸಹೋದರ ಕಿರಣ್ (36 ವರ್ಷ) ಎಂಬವರುಗಳನ್ನು ಇಂದು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾರ್ತಿಕ್ ಸುವರ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಅಶ್ರಯ ನೀಡಿದ ಮೇರೆಗೆ ಮಂಗಳೂರು ಅತ್ತಾವರ ನಿವಾಸಿ ಸ್ಡೀವನ್ ಮೊಂತೆರೋ ಎಂಬಾತನನ್ನು ಪೊಲೀಸರು ಬಂಧಿಸಿರುತ್ತಾರೆ..

ಕೊಲೆಯ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದು ಪೋಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕೊಲೆ ಯಾವಾ ಉದ್ದೇಶಕ್ಕೆ ನಡೆದಿದೆ ಎನ್ನುವ ಬಗ್ಗೆ ಪೋಲೀಸರು ಇನ್ನಷ್ಟೇ ಮಾಹಿತಿ ನೀಡಬೇಕಾಗಿದೆ.

ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬವರು ಚೂರಿಯಿಂದ ಇರಿದು ಕಾರ್ತಿಕ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆಗೈಯ್ದಿದ್ದಾರೆ. ಬಳಿಕ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago