ಪುತ್ತೂರು : ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.
ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಯೂ ಚಿಕಿತ್ಸೆ ಫಲಕಾರಿ ಆಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತಿ ಬಾಲಕೃಷ್ಣ ಗೌಡ, 4ನೇ ತರಗತಿ ಕಲಿಯುತ್ತಿರುವ ಪುತ್ರ ಭವಿಷ್, 3ನೇ ತರಗತಿಯ ಸ್ವಸ್ತಿಕ್ ಮತ್ತು ಹಸುಗೂಸು ಗಂಡು ಮಗುವನ್ನು ಅಗಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…