Featured

ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ – vishwanews24

ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ

ಪುತ್ತೂರು: ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ.

ಮುಕ್ರಂಪಾಡಿಯ ಇಂಡಸ್ಟ್ರಿಯಲ್‌ ಎಸ್ಟೇಟ್‌ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ ಸನ್ಮಿತ್‌ (21) ಹೊಳೆಗೆ ಹಾರಿದ ಯುವಕನಾಗಿದ್ದಾನೆ. ಈತನ ಸ್ಕೂಟರ್ ಹೊಳೆಯ ಬದಿಯಿಂದ 150ಮೀ ದೂರದಲ್ಲಿ ನಿಲ್ಲಿಸಿದ್ದು ಅದರಲ್ಲಿ ಮೊಬೈಲ್‌ ಫೋನ್‌, ಪರ್ಸ್‌, ಹೆಲ್ಮೆಟ್‌, ಟಿಫಿನ್‌ ಬಾಕ್ಸ್‌ ಸಹಿತ ಪತ್ತೆಯಾಗಿದೆ.

ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡ ಎಂಬವರ ಪುತ್ರನಾಗಿರುವ ಸನ್ಮಿತ್ ಮಹೇಂದ್ರ ಶೋರೂಂ ನಲ್ಲಿ ಉದ್ಯೋಗಿಯಾಗಿದ್ದು ನಿನ್ನೆಯೂ ಕೆಲಸಕ್ಕೆ ಹಾಜರಾಗಿದ್ದ. ಪ್ರತಿದಿನ ಸಂಜೆ 6.30ರ ವೇಳೆಗೆ ಮನೆ ಸೇರುತ್ತಿದ್ದ ಸನ್ಮಿತ್‌ ನಿನ್ನೆಯ ದಿನ ತಂದೆಗೆ ಕರೆಮಾಡಿ ಮನೆ ತಲುಪುವಾಗ ರಾತ್ರಿ 10 ಗಂಟೆಯಾಗಬಹುದೆಂದು ತಿಳಿಸಿದ್ದ. ರಾತ್ರಿ 9.30ರ ವರೆಗೂ ಮಗ ಮನೆಗೆ ಬಾರದಿದ್ದಾಗ ತಂದೆ ಖುದ್ದಾಗಿ ಸನ್ಮಿತ್‌ ಗೆ ಕರೆಮಾಡಿ ವಿಚಾರಿಸಿದ್ದು ಇನ್ನರ್ಧ ಗಂಟೆಯಲ್ಲಿ ಮನೆ ಬರುವುದಾಗಿ ಹೇಳಿದ್ದ. ರಾತ್ರಿ 11 ಗಂಟೆಯಾದರೂ ಮಗ ಮನೆಗೆ ಬಾರದಿದ್ದಾಗ ತಂದೆ ಮತ್ತೆ ಸನ್ಮಿತ್‌ ಮೊಬೈಲ್‌ ಗೆ ಕರೆ ಮಾಡಿದ್ದು, ಕರೆ ಸ್ವೀಕರಿಸುತ್ತಿರಲಿಲ್ಲ.

ರಾತ್ರಿ 1 ರವರೆಗೂ ಮಗ ಬಾರದಿದ್ದಾಗ ಪರಿಚಯದವರೊಂದಿಗೆ ಕಾರಿನಲ್ಲಿ ಮಗನನ್ನು ಹುಡುಕುತ್ತಾ ಬಂದಿದ್ದಾರೆ. ಈ ವೇಳೆ ಸರ್ವೆ ಹೊಳೆ ಬಳಿ ಮಗನ ಸ್ಕೂಟರ್‌ ಕಂಡು ಸಂಶಯಗೊಂಡ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಸ್ಕೂಟರ್‌ ಮತ್ತು ಅದರಲ್ಲಿದ್ದ ವಸ್ತುಗಳು ಸನ್ಮಿತ್‌ ಗೆ ಸೇರಿದ್ದೆಂದು ಖಚಿತವಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ ಪ್ರಶ್ನೆಗೆ ಪೊಲೀಸ್‌ ತನಿಖೆಯ ಬಳಿಕ ಉತ್ತರ ಸಿಗಬೇಕಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago