Featured

ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ – vishwanews24

ಪುತ್ತೂರು: ಹೊಳೆಯ ಬದಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ

ಪುತ್ತೂರು: ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ.

ಮುಕ್ರಂಪಾಡಿಯ ಇಂಡಸ್ಟ್ರಿಯಲ್‌ ಎಸ್ಟೇಟ್‌ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ ಸನ್ಮಿತ್‌ (21) ಹೊಳೆಗೆ ಹಾರಿದ ಯುವಕನಾಗಿದ್ದಾನೆ. ಈತನ ಸ್ಕೂಟರ್ ಹೊಳೆಯ ಬದಿಯಿಂದ 150ಮೀ ದೂರದಲ್ಲಿ ನಿಲ್ಲಿಸಿದ್ದು ಅದರಲ್ಲಿ ಮೊಬೈಲ್‌ ಫೋನ್‌, ಪರ್ಸ್‌, ಹೆಲ್ಮೆಟ್‌, ಟಿಫಿನ್‌ ಬಾಕ್ಸ್‌ ಸಹಿತ ಪತ್ತೆಯಾಗಿದೆ.

ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರ ಗೌಡ ಎಂಬವರ ಪುತ್ರನಾಗಿರುವ ಸನ್ಮಿತ್ ಮಹೇಂದ್ರ ಶೋರೂಂ ನಲ್ಲಿ ಉದ್ಯೋಗಿಯಾಗಿದ್ದು ನಿನ್ನೆಯೂ ಕೆಲಸಕ್ಕೆ ಹಾಜರಾಗಿದ್ದ. ಪ್ರತಿದಿನ ಸಂಜೆ 6.30ರ ವೇಳೆಗೆ ಮನೆ ಸೇರುತ್ತಿದ್ದ ಸನ್ಮಿತ್‌ ನಿನ್ನೆಯ ದಿನ ತಂದೆಗೆ ಕರೆಮಾಡಿ ಮನೆ ತಲುಪುವಾಗ ರಾತ್ರಿ 10 ಗಂಟೆಯಾಗಬಹುದೆಂದು ತಿಳಿಸಿದ್ದ. ರಾತ್ರಿ 9.30ರ ವರೆಗೂ ಮಗ ಮನೆಗೆ ಬಾರದಿದ್ದಾಗ ತಂದೆ ಖುದ್ದಾಗಿ ಸನ್ಮಿತ್‌ ಗೆ ಕರೆಮಾಡಿ ವಿಚಾರಿಸಿದ್ದು ಇನ್ನರ್ಧ ಗಂಟೆಯಲ್ಲಿ ಮನೆ ಬರುವುದಾಗಿ ಹೇಳಿದ್ದ. ರಾತ್ರಿ 11 ಗಂಟೆಯಾದರೂ ಮಗ ಮನೆಗೆ ಬಾರದಿದ್ದಾಗ ತಂದೆ ಮತ್ತೆ ಸನ್ಮಿತ್‌ ಮೊಬೈಲ್‌ ಗೆ ಕರೆ ಮಾಡಿದ್ದು, ಕರೆ ಸ್ವೀಕರಿಸುತ್ತಿರಲಿಲ್ಲ.

ರಾತ್ರಿ 1 ರವರೆಗೂ ಮಗ ಬಾರದಿದ್ದಾಗ ಪರಿಚಯದವರೊಂದಿಗೆ ಕಾರಿನಲ್ಲಿ ಮಗನನ್ನು ಹುಡುಕುತ್ತಾ ಬಂದಿದ್ದಾರೆ. ಈ ವೇಳೆ ಸರ್ವೆ ಹೊಳೆ ಬಳಿ ಮಗನ ಸ್ಕೂಟರ್‌ ಕಂಡು ಸಂಶಯಗೊಂಡ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಸ್ಕೂಟರ್‌ ಮತ್ತು ಅದರಲ್ಲಿದ್ದ ವಸ್ತುಗಳು ಸನ್ಮಿತ್‌ ಗೆ ಸೇರಿದ್ದೆಂದು ಖಚಿತವಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ ಪ್ರಶ್ನೆಗೆ ಪೊಲೀಸ್‌ ತನಿಖೆಯ ಬಳಿಕ ಉತ್ತರ ಸಿಗಬೇಕಾಗಿದೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

6 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

9 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

9 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

9 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

9 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

10 hours ago