ಪುತ್ತೂರು: ಡಾ| ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ 156 ವರ್ಷಗಳ ಪುರಾತನ ಕಟ್ಟಡ ರಾತ್ರೋರಾತ್ರಿ ನೆಲಸಮ ಮಾಡಿರುವ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ದ.ಕ ಜಿಲ್ಲಾಧಿಕಾರಿ ಅವರು ಡಿಡಿಪಿಐ ಹಾಗೂ ಜಿ.ಪಂ ಸಿ ಇಓ ಸೂಚನೆ ನೀಡಿದ್ದಾರೆ.
ಪುತ್ತೂರು ಹೃದಯಭಾಗದಲ್ಲಿರುವ ಸರಕಾರಿ ಶಾಲೆಯ ಪ್ರಾಚೀನ ಕಟ್ಟಡ ಇದಾಗಿದ್ದು, 1865ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಆರಂಭಿಸಿದ ಲಂಡನ್ ಥಿಯೇಟರ್ ಮಾದರಿ ಶಾಲೆ ಇದಾಗಿತ್ತು. ಪುತ್ತೂರು ಹಾಗೂ ಅಕ್ಕಪಕ್ಕ ೨-೩ ತಾಲೂಕುಗಳಲ್ಲೂ ಶಾಲೆಯೇ ಇಲ್ಲದಿರುವ ಸಂದರ್ಭ ಬ್ರಿಟಿಷ್ ಸರ್ಕಾರ ಮೊತ್ತ ಮೊದಲು ಪುತ್ತೂರಿನ ಹೃದಯಭಾಗದಲ್ಲಿ ಶಾಲೆ ನಿರ್ಮಿಸಿತ್ತು. ಪ್ರಾಚೀನ ಪಾರಂಪರಿಕ ಕಟ್ಟಡಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದ ಈ ಕಟ್ಟಡದ ಪುನರುತ್ಥಾನಕ್ಕೆ ದಶಕಗಳಿಂದ ಕೂಗೂ ಕೇಳಿಬಂದಿತ್ತು.
ಡಾ| ಶಿವರಾಮ ಕಾರಂತರು ೮೩ ವರ್ಷಗಳ ಹಿಂದೆ ನಾಟ್ಯ ನಿರ್ದೇಶನವನ್ನು ಮಾಡುತ್ತಿದ್ದರು. ಆದರೆ ಡಿ. ೧೧ ರಂದು ಎಸ್ ಡಿ ಎಂ ಸಿ ಕಟ್ಟಡ ಸುರಕ್ಷಿತವಲ್ಲ ಎಂಬ ಕಾರಣಕ್ಕೆ ನೆಲಸಮ ಮಾಡಿತ್ತು. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.
ಜಿಲ್ಲಾಧಿಕಾರಿ ಸೂಚನೆಯಂತೆ ಡಿಡಿಪಿಐ ಘಟನೆ ಬಗ್ಗೆ ವರದಿ ನೀಡುವಂತೆ ಬಿಇಓ ಲೋಕೇಶ್ ಅವರಿಗೆ ಸೂಚಿಸಿದ್ದು, ಅವರು ಎಸ್ ಡಿಎಂಸಿ ಹಾಗೂ ಮುಖ್ಯಗುರುಗಳಿಗೆ ನೋಟೀಸ್ ನೀಡಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…