ಪುತ್ತೂರು: ಡಾ| ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ 156 ವರ್ಷಗಳ ಪುರಾತನ ಕಟ್ಟಡ ರಾತ್ರೋರಾತ್ರಿ ನೆಲಸಮ ಮಾಡಿರುವ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ದ.ಕ ಜಿಲ್ಲಾಧಿಕಾರಿ ಅವರು ಡಿಡಿಪಿಐ ಹಾಗೂ ಜಿ.ಪಂ ಸಿ ಇಓ ಸೂಚನೆ ನೀಡಿದ್ದಾರೆ.
ಪುತ್ತೂರು ಹೃದಯಭಾಗದಲ್ಲಿರುವ ಸರಕಾರಿ ಶಾಲೆಯ ಪ್ರಾಚೀನ ಕಟ್ಟಡ ಇದಾಗಿದ್ದು, 1865ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಆರಂಭಿಸಿದ ಲಂಡನ್ ಥಿಯೇಟರ್ ಮಾದರಿ ಶಾಲೆ ಇದಾಗಿತ್ತು. ಪುತ್ತೂರು ಹಾಗೂ ಅಕ್ಕಪಕ್ಕ ೨-೩ ತಾಲೂಕುಗಳಲ್ಲೂ ಶಾಲೆಯೇ ಇಲ್ಲದಿರುವ ಸಂದರ್ಭ ಬ್ರಿಟಿಷ್ ಸರ್ಕಾರ ಮೊತ್ತ ಮೊದಲು ಪುತ್ತೂರಿನ ಹೃದಯಭಾಗದಲ್ಲಿ ಶಾಲೆ ನಿರ್ಮಿಸಿತ್ತು. ಪ್ರಾಚೀನ ಪಾರಂಪರಿಕ ಕಟ್ಟಡಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದ ಈ ಕಟ್ಟಡದ ಪುನರುತ್ಥಾನಕ್ಕೆ ದಶಕಗಳಿಂದ ಕೂಗೂ ಕೇಳಿಬಂದಿತ್ತು.
ಡಾ| ಶಿವರಾಮ ಕಾರಂತರು ೮೩ ವರ್ಷಗಳ ಹಿಂದೆ ನಾಟ್ಯ ನಿರ್ದೇಶನವನ್ನು ಮಾಡುತ್ತಿದ್ದರು. ಆದರೆ ಡಿ. ೧೧ ರಂದು ಎಸ್ ಡಿ ಎಂ ಸಿ ಕಟ್ಟಡ ಸುರಕ್ಷಿತವಲ್ಲ ಎಂಬ ಕಾರಣಕ್ಕೆ ನೆಲಸಮ ಮಾಡಿತ್ತು. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.
ಜಿಲ್ಲಾಧಿಕಾರಿ ಸೂಚನೆಯಂತೆ ಡಿಡಿಪಿಐ ಘಟನೆ ಬಗ್ಗೆ ವರದಿ ನೀಡುವಂತೆ ಬಿಇಓ ಲೋಕೇಶ್ ಅವರಿಗೆ ಸೂಚಿಸಿದ್ದು, ಅವರು ಎಸ್ ಡಿಎಂಸಿ ಹಾಗೂ ಮುಖ್ಯಗುರುಗಳಿಗೆ ನೋಟೀಸ್ ನೀಡಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…