ಪುತ್ತೂರು: ಡಾ| ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ 156 ವರ್ಷಗಳ ಪುರಾತನ ಕಟ್ಟಡ ರಾತ್ರೋರಾತ್ರಿ ನೆಲಸಮ ಮಾಡಿರುವ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ದ.ಕ ಜಿಲ್ಲಾಧಿಕಾರಿ ಅವರು ಡಿಡಿಪಿಐ ಹಾಗೂ ಜಿ.ಪಂ ಸಿ ಇಓ ಸೂಚನೆ ನೀಡಿದ್ದಾರೆ.
ಪುತ್ತೂರು ಹೃದಯಭಾಗದಲ್ಲಿರುವ ಸರಕಾರಿ ಶಾಲೆಯ ಪ್ರಾಚೀನ ಕಟ್ಟಡ ಇದಾಗಿದ್ದು, 1865ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಆರಂಭಿಸಿದ ಲಂಡನ್ ಥಿಯೇಟರ್ ಮಾದರಿ ಶಾಲೆ ಇದಾಗಿತ್ತು. ಪುತ್ತೂರು ಹಾಗೂ ಅಕ್ಕಪಕ್ಕ ೨-೩ ತಾಲೂಕುಗಳಲ್ಲೂ ಶಾಲೆಯೇ ಇಲ್ಲದಿರುವ ಸಂದರ್ಭ ಬ್ರಿಟಿಷ್ ಸರ್ಕಾರ ಮೊತ್ತ ಮೊದಲು ಪುತ್ತೂರಿನ ಹೃದಯಭಾಗದಲ್ಲಿ ಶಾಲೆ ನಿರ್ಮಿಸಿತ್ತು. ಪ್ರಾಚೀನ ಪಾರಂಪರಿಕ ಕಟ್ಟಡಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದ ಈ ಕಟ್ಟಡದ ಪುನರುತ್ಥಾನಕ್ಕೆ ದಶಕಗಳಿಂದ ಕೂಗೂ ಕೇಳಿಬಂದಿತ್ತು.
ಡಾ| ಶಿವರಾಮ ಕಾರಂತರು ೮೩ ವರ್ಷಗಳ ಹಿಂದೆ ನಾಟ್ಯ ನಿರ್ದೇಶನವನ್ನು ಮಾಡುತ್ತಿದ್ದರು. ಆದರೆ ಡಿ. ೧೧ ರಂದು ಎಸ್ ಡಿ ಎಂ ಸಿ ಕಟ್ಟಡ ಸುರಕ್ಷಿತವಲ್ಲ ಎಂಬ ಕಾರಣಕ್ಕೆ ನೆಲಸಮ ಮಾಡಿತ್ತು. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.
ಜಿಲ್ಲಾಧಿಕಾರಿ ಸೂಚನೆಯಂತೆ ಡಿಡಿಪಿಐ ಘಟನೆ ಬಗ್ಗೆ ವರದಿ ನೀಡುವಂತೆ ಬಿಇಓ ಲೋಕೇಶ್ ಅವರಿಗೆ ಸೂಚಿಸಿದ್ದು, ಅವರು ಎಸ್ ಡಿಎಂಸಿ ಹಾಗೂ ಮುಖ್ಯಗುರುಗಳಿಗೆ ನೋಟೀಸ್ ನೀಡಿದ್ದಾರೆ.
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…