Featured

ಪುತ್ರನಿಗೆ ಕಿಡ್ನಿದಾನ ಮಾಡಿ ಪುನರ್ಜನ್ಮ ನೀಡಿದ 72 ವರ್ಷದ ತಾಯಿ

ಬೆಂಗಳೂರು, : ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ 72ರ ಹರೆಯದ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ತನ್ನ 42ರ ಹರೆಯದ ಮಗನಿಗೆ ಕಿಡ್ನಿದಾನ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಯೋಸಹಜ ಸಮಸ್ಯೆಗಳು ಉದ್ಭವಿಸುವ ಹಿನ್ನೆಲೆಯಲ್ಲಿ 65 ವರ್ಷದ ಬಳಿಕ ಅಂಗಾಂಗ ದಾನಕ್ಕೆ ವೈದ್ಯರು ಸಲಹೆ ನೀಡುವುದೇ ಇಲ್ಲ. ಆದರೆ 72 ವರ್ಷದ ತಾಯಿ ತನ್ನ ಮಗನಿಗೆ ಒಂದು ಕಿಡ್ನಿ ದಾನ ಮಾಡುವ ಮೂಲಕ ಹೊಸ ಜೀವನ ನೀಡಿದ್ದಾಳೆ.

ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ವೈದ್ಯರ ತಂಡ ವೃದ್ಧ ತಾಯಿಯ ಮೂತ್ರಪಿಂಡವನ್ನು ಸತ್ಯನಾರಾಯಣಾಚಾರಿಗೆ ಯಶಸ್ವಿಯಾಗಿ ಕಸಿ ಮಾಡಿದ್ದಾರೆ.

ಕಳೆದ 2 ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದೆ. ಬದುಕುವ ಆಸೆಯನ್ನೇ ಕಳೆದುಕೊಂಡಿದ್ದೆ. ಅಮ್ಮ ನನಗೆ ಪುನರ್ಜನ್ಮ ನೀಡಿದ್ದಾಳೆ ಎಂದು ಸತ್ಯನಾರಾಯಣಾಚಾರಿ ಕೃತಜ್ಞತಾ ಭಾವ ವ್ಯಕ್ತಪಡಿಸಿದ್ದಾರೆ.

ನಾವಿಬ್ಬರೂ ಒಂದು ಕಿಡ್ನಿಯಲ್ಲಿ ಬದುಕುತ್ತಿದ್ದೇವೆ. ಒಂದು ಕಿಡ್ನಿಯಲ್ಲಿ ಒಬ್ಬ ವ್ಯಕ್ತಿ ಸಾಮಾನ್ಯ ಜೀವನ ಸಾಗಿಸಬಲ್ಲ ಎಂದಾದರೆ, ಹೆಚ್ಚಾಗಿರುವ ಒಂದು ಕಿಡ್ನಿಯನ್ನು ನಾನು ನನ್ನ ಮಗನಿಗೆ ದಾನ ಮಾಡುವುದರಲ್ಲಿ ವಿಶೇಷತೆ ಏನಿದೆ? ನನ್ನ ಮಗನಿಗೆ ಕಿಡ್ನಿ ಕಸಿ ಅಗತ್ಯವಾಗಿದ್ದ ಸಮಯದಲ್ಲಿ ಈ ನಿರ್ಧಾರವೇ ಸರಿ ಎಂದೆನಿಸಿತು ಎಂದು ತಾಯಿ ಭದ್ರಕಾಳಮ್ಮ ತಿಳಿಸಿದ್ದಾರೆ.

ಈ ವಯಸ್ಸಿನಲ್ಲಿ ಸದೃಢ ಆರೋಗ್ಯ ಕಾಪಾಡಿಕೊಂಡಿರುವ ಭದ್ರಕಾಳಮ್ಮ ಇತರರಿಗೆ ಮಾದರಿ. ಈ ವಯಸ್ಸಿನಲ್ಲಿ ಕಿಡ್ನಿ ದಾನಕ್ಕೆ ಮುಂದಾಗಿರುವುದು ಅಂಗಾಂಗ ದಾನಕ್ಕೆ ಇನ್ನಷ್ಟು ಪ್ರೇರಣೆ ನೀಡುವಂತಹುದು ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಮೂತ್ರಪಿಂಡಶಾಸ್ತ್ರಜ್ಞ ಡಾ. ದೀಪಕ್‌ ಕುಮಾರ್‌ ಹೇಳಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago