Featured

ಪುತ್ರನಿಗೆ ಕಿಡ್ನಿದಾನ ಮಾಡಿ ಪುನರ್ಜನ್ಮ ನೀಡಿದ 72 ವರ್ಷದ ತಾಯಿ

ಬೆಂಗಳೂರು, : ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ 72ರ ಹರೆಯದ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ತನ್ನ 42ರ ಹರೆಯದ ಮಗನಿಗೆ ಕಿಡ್ನಿದಾನ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಯೋಸಹಜ ಸಮಸ್ಯೆಗಳು ಉದ್ಭವಿಸುವ ಹಿನ್ನೆಲೆಯಲ್ಲಿ 65 ವರ್ಷದ ಬಳಿಕ ಅಂಗಾಂಗ ದಾನಕ್ಕೆ ವೈದ್ಯರು ಸಲಹೆ ನೀಡುವುದೇ ಇಲ್ಲ. ಆದರೆ 72 ವರ್ಷದ ತಾಯಿ ತನ್ನ ಮಗನಿಗೆ ಒಂದು ಕಿಡ್ನಿ ದಾನ ಮಾಡುವ ಮೂಲಕ ಹೊಸ ಜೀವನ ನೀಡಿದ್ದಾಳೆ.

ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ವೈದ್ಯರ ತಂಡ ವೃದ್ಧ ತಾಯಿಯ ಮೂತ್ರಪಿಂಡವನ್ನು ಸತ್ಯನಾರಾಯಣಾಚಾರಿಗೆ ಯಶಸ್ವಿಯಾಗಿ ಕಸಿ ಮಾಡಿದ್ದಾರೆ.

ಕಳೆದ 2 ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದೆ. ಬದುಕುವ ಆಸೆಯನ್ನೇ ಕಳೆದುಕೊಂಡಿದ್ದೆ. ಅಮ್ಮ ನನಗೆ ಪುನರ್ಜನ್ಮ ನೀಡಿದ್ದಾಳೆ ಎಂದು ಸತ್ಯನಾರಾಯಣಾಚಾರಿ ಕೃತಜ್ಞತಾ ಭಾವ ವ್ಯಕ್ತಪಡಿಸಿದ್ದಾರೆ.

ನಾವಿಬ್ಬರೂ ಒಂದು ಕಿಡ್ನಿಯಲ್ಲಿ ಬದುಕುತ್ತಿದ್ದೇವೆ. ಒಂದು ಕಿಡ್ನಿಯಲ್ಲಿ ಒಬ್ಬ ವ್ಯಕ್ತಿ ಸಾಮಾನ್ಯ ಜೀವನ ಸಾಗಿಸಬಲ್ಲ ಎಂದಾದರೆ, ಹೆಚ್ಚಾಗಿರುವ ಒಂದು ಕಿಡ್ನಿಯನ್ನು ನಾನು ನನ್ನ ಮಗನಿಗೆ ದಾನ ಮಾಡುವುದರಲ್ಲಿ ವಿಶೇಷತೆ ಏನಿದೆ? ನನ್ನ ಮಗನಿಗೆ ಕಿಡ್ನಿ ಕಸಿ ಅಗತ್ಯವಾಗಿದ್ದ ಸಮಯದಲ್ಲಿ ಈ ನಿರ್ಧಾರವೇ ಸರಿ ಎಂದೆನಿಸಿತು ಎಂದು ತಾಯಿ ಭದ್ರಕಾಳಮ್ಮ ತಿಳಿಸಿದ್ದಾರೆ.

ಈ ವಯಸ್ಸಿನಲ್ಲಿ ಸದೃಢ ಆರೋಗ್ಯ ಕಾಪಾಡಿಕೊಂಡಿರುವ ಭದ್ರಕಾಳಮ್ಮ ಇತರರಿಗೆ ಮಾದರಿ. ಈ ವಯಸ್ಸಿನಲ್ಲಿ ಕಿಡ್ನಿ ದಾನಕ್ಕೆ ಮುಂದಾಗಿರುವುದು ಅಂಗಾಂಗ ದಾನಕ್ಕೆ ಇನ್ನಷ್ಟು ಪ್ರೇರಣೆ ನೀಡುವಂತಹುದು ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಮೂತ್ರಪಿಂಡಶಾಸ್ತ್ರಜ್ಞ ಡಾ. ದೀಪಕ್‌ ಕುಮಾರ್‌ ಹೇಳಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago