Featured

ಪುತ್ರನಿಗೆ ಕಿಡ್ನಿದಾನ ಮಾಡಿ ಪುನರ್ಜನ್ಮ ನೀಡಿದ 72 ವರ್ಷದ ತಾಯಿ

ಬೆಂಗಳೂರು, : ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ 72ರ ಹರೆಯದ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ತನ್ನ 42ರ ಹರೆಯದ ಮಗನಿಗೆ ಕಿಡ್ನಿದಾನ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಯೋಸಹಜ ಸಮಸ್ಯೆಗಳು ಉದ್ಭವಿಸುವ ಹಿನ್ನೆಲೆಯಲ್ಲಿ 65 ವರ್ಷದ ಬಳಿಕ ಅಂಗಾಂಗ ದಾನಕ್ಕೆ ವೈದ್ಯರು ಸಲಹೆ ನೀಡುವುದೇ ಇಲ್ಲ. ಆದರೆ 72 ವರ್ಷದ ತಾಯಿ ತನ್ನ ಮಗನಿಗೆ ಒಂದು ಕಿಡ್ನಿ ದಾನ ಮಾಡುವ ಮೂಲಕ ಹೊಸ ಜೀವನ ನೀಡಿದ್ದಾಳೆ.

ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ವೈದ್ಯರ ತಂಡ ವೃದ್ಧ ತಾಯಿಯ ಮೂತ್ರಪಿಂಡವನ್ನು ಸತ್ಯನಾರಾಯಣಾಚಾರಿಗೆ ಯಶಸ್ವಿಯಾಗಿ ಕಸಿ ಮಾಡಿದ್ದಾರೆ.

ಕಳೆದ 2 ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದೆ. ಬದುಕುವ ಆಸೆಯನ್ನೇ ಕಳೆದುಕೊಂಡಿದ್ದೆ. ಅಮ್ಮ ನನಗೆ ಪುನರ್ಜನ್ಮ ನೀಡಿದ್ದಾಳೆ ಎಂದು ಸತ್ಯನಾರಾಯಣಾಚಾರಿ ಕೃತಜ್ಞತಾ ಭಾವ ವ್ಯಕ್ತಪಡಿಸಿದ್ದಾರೆ.

ನಾವಿಬ್ಬರೂ ಒಂದು ಕಿಡ್ನಿಯಲ್ಲಿ ಬದುಕುತ್ತಿದ್ದೇವೆ. ಒಂದು ಕಿಡ್ನಿಯಲ್ಲಿ ಒಬ್ಬ ವ್ಯಕ್ತಿ ಸಾಮಾನ್ಯ ಜೀವನ ಸಾಗಿಸಬಲ್ಲ ಎಂದಾದರೆ, ಹೆಚ್ಚಾಗಿರುವ ಒಂದು ಕಿಡ್ನಿಯನ್ನು ನಾನು ನನ್ನ ಮಗನಿಗೆ ದಾನ ಮಾಡುವುದರಲ್ಲಿ ವಿಶೇಷತೆ ಏನಿದೆ? ನನ್ನ ಮಗನಿಗೆ ಕಿಡ್ನಿ ಕಸಿ ಅಗತ್ಯವಾಗಿದ್ದ ಸಮಯದಲ್ಲಿ ಈ ನಿರ್ಧಾರವೇ ಸರಿ ಎಂದೆನಿಸಿತು ಎಂದು ತಾಯಿ ಭದ್ರಕಾಳಮ್ಮ ತಿಳಿಸಿದ್ದಾರೆ.

ಈ ವಯಸ್ಸಿನಲ್ಲಿ ಸದೃಢ ಆರೋಗ್ಯ ಕಾಪಾಡಿಕೊಂಡಿರುವ ಭದ್ರಕಾಳಮ್ಮ ಇತರರಿಗೆ ಮಾದರಿ. ಈ ವಯಸ್ಸಿನಲ್ಲಿ ಕಿಡ್ನಿ ದಾನಕ್ಕೆ ಮುಂದಾಗಿರುವುದು ಅಂಗಾಂಗ ದಾನಕ್ಕೆ ಇನ್ನಷ್ಟು ಪ್ರೇರಣೆ ನೀಡುವಂತಹುದು ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಮೂತ್ರಪಿಂಡಶಾಸ್ತ್ರಜ್ಞ ಡಾ. ದೀಪಕ್‌ ಕುಮಾರ್‌ ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago