ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮದ (KSDL) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ರಾತ್ರಿಯೇ ರಾಜೀನಾಮೆಗೆ ಸಿಎಂ ಸೂಚನೆ ನೀಡಿದ್ದರು. ಜೊತೆಗೆ ಕಾನೂನು ಕ್ರಮ ಎದುರಿಸುವಂತೆಯೂ ಸೂಚಿಸಿದ್ದರು.
ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಶಾಂತ್ ಮತ್ತು ಸಹಚರರನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಲೋಕಾಯುಕ್ತ ಮುಂದಾಗಿದೆ. ಅಲ್ಲದೇ ಬಂಧಿತರನ್ನು ಪೊಲೀಸ್ ಕಸ್ಟಡಿಗೆ ವಹಿಸುವಂತೆ ಮನವಿ ಮಾಡಲಿದೆ.
ಪ್ರಶಾಂತ್ನನ್ನು ಬಂಧಿಸಿದ ಬೆನ್ನಲ್ಲೇ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಒಟ್ಟು 7.72 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿರುವ ಪ್ರಶಾಂತ್, ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ತಂದೆ ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷರಾಗಿರುವ ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ, ರಾಸಾಯನಿಕ ಸರಬರಾಜು ವೇಳಾಪಟ್ಟಿ ಮತ್ತು ಕಾರ್ಯಾದೇಶ ವಿತರಿಸಲು 81 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ಶ್ರೇಯಸ್ ಕಶ್ಯಪ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…