Featured

ಪುತ್ರ, ಸೊಸೆಯಿಂದ ಮಾನಸಿಕ ಕಿರುಕುಳ: ಹಿರಿಯ ನಟಿ ಶ್ಯಾಮಲಾದೇವಿ ದೂರು – Vishwanews24

ಪುತ್ರ, ಸೊಸೆಯಿಂದ ಮಾನಸಿಕ ಕಿರುಕುಳ: ಹಿರಿಯ ನಟಿ ಶ್ಯಾಮಲಾದೇವಿ ದೂರು

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಶ್ಯಾಮಲಾದೇವಿ  ತಮ್ಮ ಮಗ ಹಾಗೂ ಸೊಸೆಯ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಶ್ಯಾಮಲಾದೇವಿ ಅದೆಷ್ಟೋ ಚಲನಚಿತ್ರಗಳಲ್ಲಿ ನಟಿಸಿದ್ದ ಕಲಾವಿದೆ. ಸುಖ ದುಖಃದ ಪಾತ್ರಕ್ಕೆ ಜೀವ ತುಂಬಿದ ನಟಿಯೇ ಕಣ್ಣೀರು ಹಾಕುತ್ತಾ ಪೊಲೀಸ್ ಠಾಣೆಯ ಮುಂದೆ ನಿಲ್ಲುವಂತೆ ಆಗಿದೆ. ಇದಕ್ಕೆ ಕಾರಣವಾಗಿದ್ದು ಮಾತ್ರ ತಾನೇ ಜನ್ಮ ಕೊಟ್ಟ ಮಗ.

ಸಾಕಷ್ಟು ಕನ್ನಡದ ಚಲನಚಿತ್ರದಲ್ಲಿ ನಟಿಸಿರೋ ಶ್ಯಾಮಲಾದೇವಿ ಇವತ್ತು ಕಣ್ಣೀರು ಹಾಕುತ್ತಾ ಬೀದಿಯಲ್ಲಿ ನಿಂತಿದ್ದಾರೆ. ಮಗ ನಿತೀನ್ ಮತ್ತು ಸೊಸೆ ಸ್ಮಿತಾ ಅವರೇ ಇವರ ಕಣ್ಣೀರಿಗೆ ಕಾರಣ ಆಗಿದ್ದಾರೆ. ಚಂದ್ರಲೇಔಟ್ ನ ಬಳಿ ಅಲ್ಲಿ ಎರಡು ಅಂತಸ್ತಿನ ಮನೆಯಲ್ಲಿ ಮಗನ ಜೊತೆಯಲ್ಲಿ ಶ್ಯಾಮಲಾದೇವಿ ವಾಸವಾಗಿದ್ದಾರೆ. ಶ್ಯಾಮಲಾದೇವಿಗೆ ವಯಸ್ಸಾಗಿರೋದ್ರಿಂದ ಮಗ ನಿತೀನ್ ಮತ್ತು ಸೊಸೆ ಇಬ್ಬರೂ ಮನೆಯಿಂದ ಹೊರಗೆ ಹಾಕೋದಕ್ಕೆ ಪ್ರಯತ್ನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ತಾಯಿ ಅನ್ನುವುದನ್ನೂ ಲೆಕ್ಕಿಸದೇ ಈ ಹಿರಿಯ ನಟಿಗೆ ಕೆಟ್ಟ ಕೆಟ್ಟ ಪದಗಳಿಂದ ಮಾತನಾಡೊದು, ಬೇಕಂತಲೇ ಹಿಂಸೆಯನ್ನು ಕೊಡೋದು ಮಾಡುತ್ತಾ ಇದ್ದಾರಂತೆ ಅಲ್ಲದೇ, ಕೈಗೆ ಸಿಕ್ಕ ವಸ್ತುಗಳಿಂದ ಶ್ಯಾಮಲಾದೇವಿಯ ಮೇಲೆ ಹಲ್ಲೆ ಮಾಡಿದ್ದಾರಂತೆ. ಮನೆಯಿಂದ ಹೊರಗೆ ಹಾಕೋದಕ್ಕಾಗಿಯೇ ಸರಿಯಾಗಿ ಮನೆಯಲ್ಲಿ ಊಟವನ್ನು ಹಾಕುತ್ತಾ ಇಲ್ಲ, ನನ್ನ ಊಟವನ್ನು ನಾನೇ ಮಾಡಿಕೊಂಡರೂ ಹಿಂಸೆ ಕೊಡ್ತಾ ಇದ್ದಾರೆ ಅಂತ ಬಸವನಗುಡಿ ಪೊಲೀಸ್ ಠಾಣೆಗೆ ಮಗ ಹಾಗೂ ಸೊಸೆ ಮೇಲೆ ದೂರು ನೀಡಿದ್ದಾರೆ ಶ್ಯಾಮಲಾ ದೇವಿ.

ಈ ಹಿಂದೆಯೂ ಶ್ಯಾಮಲಾದೇವಿ ಅವರು ಮಗ ಹಾಗೂ ಸೊಸೆಯ ವಿರುದ್ಧ ಹಿರಿಯ ನಾಗರೀಕರ ವೇದಿಕೆಗೆ ದೂರು ನೀಡಿದ್ದರು. ಆಗ ಮಗ ಮತ್ತು ಸೊಸೆ ತಪ್ಪೊಪ್ಪಿಕೊಂಡು ಮತ್ತೆ ತಾಯಿಯೊಂದಿಗೆ ವಾಸಿಸುತ್ತಿದ್ದರು. ಇದೀಗ ಮತ್ತೆ ತಾಯಿಗೆ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago