Featured

ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಹೆಸರಿನಲ್ಲಿ ಆಚರಿಸಲಾಗುವುದು : ಸಿಎಂ ಘೋಷಣೆ – Vishwanews24

ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಹೆಸರಿನಲ್ಲಿ ಆಚರಿಸಲಾಗುವುದು : ಸಿಎಂ ಘೋಷಣೆ

ಬೆಂಗಳೂರು : ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನವನ್ನು ಸ್ಫೂರ್ತಿ ದಿನ ಹೆಸರಿನಲ್ಲಿ ಆಚರಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ಈ ಹಿಂದಿನ ಸರಕಾರ ಘೋಷಣೆ ಮಾಡಿತ್ತು. ಆದರೆ, ಚುನಾವಣೆ ಕಾರಣದಿಂದಾಗಿ ಆಚರಿಸಲು ಆಗಿಲ್ಲ. ಆದರೆ, ನಮ್ಮ ಸರಕಾರ ಆ ದಿನವನ್ನು ಸ್ಫೂರ್ತಿ ದಿನ ಎಂದು ಆಚರಿಸಲಾಗುವುದು ಎಂದು ತಿಳಿಸಿದರು.

ಕಲೆ ಮತ್ತು ತಂತ್ರಜ್ಞಾನದ ಮೂಲಕ ವಿದೇಶಿ ಕಲಾವಿದರಿಂದ ಸಿದ್ದಗೊಂಡ ಪಿಆರ್‌ಕೆ ಕಲಾಕೃತಿ ಅ.16 ಖಾಸಗಿ ಹೋಟೆಲ್‌ನಲ್ಲಿ ಅನಾವರಣ ಆಗಿದೆ. ಪುನೀತ್ ಹುಟ್ಟು ಹಾಕಿರೋ ಪಿಆರ್‌ಕೆ ಸ್ಟುಡಿಯೋಸ್ ಸಹಯೋಗದಲ್ಲಿ ಅಪ್ಪು ಕಲಾಕೃತಿ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್‌ ಕುಟುಂಬದ ಜೊತೆ ಸಿಎಂ ಸಿದ್ದರಾಮಯ್ಯ ಕೂಡ ಸಾಥ್‌ ನೀಡಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದು ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆ ಅನಾವರಣ ಮಾಡಿದ್ದೇವೆ. ಈ ಪ್ರತಿಮೆಯನ್ನ N3K ಸ್ಟುಡಿಯೋಸ್- ಪಿಆರ್‌ಕೆ ಸ್ಟುಡಿಯೋಸ್ ಸಹಯೋಗದಲ್ಲಿ ಮಾಡಿದ್ದಾರೆ. ಕರ್ನಾಟಕ ಕಂಡಂತಹ ಸರಳ, ಸೌಜನ್ಯ ವ್ಯಕ್ತಿತ್ವ ಹೊಂದಿರುವ ವ್ಯಕ್ತಿ ಪುನೀತ್ ಅವರಾಗಿದ್ದರು. ಇಡೀ ಕರ್ನಾಟಕದಲ್ಲಿ ಬಹುಶಃ ಇವರಷ್ಟು ಅಭಿಮಾನಿಗಳನ್ನ ಯಾರೂ ಪಡೆದುಕೊಂಡಿರಲಿಲ್ಲ ಎಂದು ಹೇಳಿದರು.

ಪುನೀತ್ ಕಲಾಕೃತಿಯನ್ನ ಆಂತ್ರಾಪೋಸ್ಟಾ ತಂತ್ರಜ್ಞಾನ ಬಳಸಿ ಮಾಡಲಾಗಿದ್ದು, ಇದಕ್ಕಾಗಿ ಸಾಕಷ್ಟು ಸಂಶೋಧನೆ ಮಾಡಿದ್ದೇನೆ ಎಂದು ಕಲಾವಿದ ವಿಚಾರ್ ಮಾತನಾಡಿದ್ದಾರೆ. ಆಸ್ಕರ್ ವಿನ್ನಿಂಗ್ ಅವತಾರ್ ಮೂವಿಗೆ ಬಳಸಿರೋ Z ಬ್ರಷ್ ಸಾಫ್ಟ್‌ವೇರ್ ಬಳಸಿ ಮಾಡಲಾಗಿದೆ. ಬೇರೆ ಬೇರೆ ರೀತಿಯ ಲೈಟಿಂಗ್ ಬಳಸಿ ಮಾಡಲಾಗಿದೆ. ಡಿಜಿಟಲ್‌ನಲ್ಲಿ ಮಾಡಿ, ತ್ರೀಡಿಯಲ್ಲಿ ಮಾಡಿದ್ದೇನೆ. ಇದು ನನ್ನ ಬಹಳ ದಿನದ ಕನಸು ಕನಸಾಗಿತ್ತು. ಈಗ ನನಸಾಗಿದೆ ಎಂದು ಕಲಾವಿದ ವಿಚಾರ್ ಹೇಳಿದ್ದಾರೆ.

ರಾಘಣ್ಣ ಮಾತನಾಡಿ, ಈ ತಿಂಗಳ 29ಕ್ಕೆ ಅಪ್ಪು ಅಗಲಿ ಎರಡು ವರ್ಷ ಆಗಲಿದೆ. ಇಂದು ಈ ಪ್ರತಿಮೆ ಪ್ರೀತಿಯಿಂದ ತಯಾರಾಗಿದೆ. ಈ ಪ್ರತಿಮೆಯನ್ನು ಕಷ್ಟ ಪಟ್ಟು ಮಾಡಿಲ್ಲ, ಇಷ್ಟ ಪಟ್ಟು ಮಾಡಿದ್ದಾರೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago