ಚೆನ್ನೈ : ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸಿನಿಮಾ ಲೋಕದ ಸ್ನೇಹಿತರು ಗೆಳೆಯನ ಸ್ಮರಿಸಿದ್ದಾರೆ.
ಪುನೀತ್ ಅಕಾಲಿಕ ಮರಣದ ನೋವನ್ನು ಅನಿವಾರ್ಯವಾಗಿ ಅರಗಿಸಿಕೊಳ್ಳಬೇಕಾಗಿದೆ. ಪುನೀತ್ ರಾಜ್ ಕುಮಾರ್ ಸುಮಾರು 1800 ಮಕ್ಕಳ (Children)ವಿದ್ಯಾಭ್ಯಾಸದ (Education)ಹೊಣೆ ಹೊತ್ತಿದ್ದರು.
ಪುನೀತ್ ಅವರಿಗೆ ನಮನ ಸಲ್ಲಿಸುತ್ತ ಮಾತನಾಡಿದ ವಿಶಾಲ್ (Actor Vishal) ಈ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಿಳಿಸಿದ್ದಾರೆ. ಇಂಥದ್ದೊಂದು ಕಾರ್ಯಕ್ರಮದಲ್ಲಿ ಮಾತನಾಡಬೇಕಾಗುತ್ತದೆ ಎನ್ನುವ ಯಾವ ಅಂದಾಜು ಇರಲಿಲ್ಲ. ಪುನೀತ್ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದು ವಿಶಾಲ್ ಹೇಳಿದರು. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ವಿಶಾಲ್ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಸಿನಿಮಾದಲ್ಲಿ ನಾಯಕರಾಗಿರುವ ಜತೆ ಪುನೀತ್ ನಿಜಜೀವನದಲ್ಲಿಯೂ ನಾಯಕರಾಗಿ ಕೆಲಸ ಮಾಡಿಕೊಂಡು ಬಂದವರು. ಅನಾಥರು, ಮಾರಕ ರೋಗಗಳಿಂದ ಬಳಲುತ್ತಿರುವವರ ಸಹಾಯಕ್ಕೆ ಧಾವಿಸುತ್ತಿದ್ದರು. ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.
ಪವರ್ ಸ್ಟಾರ್ ಎಂದು ಜನರಿಂದ ಕರೆಸಿಕೊಳ್ಳುವ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಇಡೀ ಕರ್ನಾಟಕ ಸೇರಿ ಎಲ್ಲ ಚಿತ್ರರಂಗಗಳು ಕಂಬನಿ ಮಿಡಿದಿದ್ದವು. ಭಾನುವಾರ ಬೆಳಗ್ಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿತ್ತು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…