ಚೆನ್ನೈ : ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸಿನಿಮಾ ಲೋಕದ ಸ್ನೇಹಿತರು ಗೆಳೆಯನ ಸ್ಮರಿಸಿದ್ದಾರೆ.
ಪುನೀತ್ ಅಕಾಲಿಕ ಮರಣದ ನೋವನ್ನು ಅನಿವಾರ್ಯವಾಗಿ ಅರಗಿಸಿಕೊಳ್ಳಬೇಕಾಗಿದೆ. ಪುನೀತ್ ರಾಜ್ ಕುಮಾರ್ ಸುಮಾರು 1800 ಮಕ್ಕಳ (Children)ವಿದ್ಯಾಭ್ಯಾಸದ (Education)ಹೊಣೆ ಹೊತ್ತಿದ್ದರು.
ಪುನೀತ್ ಅವರಿಗೆ ನಮನ ಸಲ್ಲಿಸುತ್ತ ಮಾತನಾಡಿದ ವಿಶಾಲ್ (Actor Vishal) ಈ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಿಳಿಸಿದ್ದಾರೆ. ಇಂಥದ್ದೊಂದು ಕಾರ್ಯಕ್ರಮದಲ್ಲಿ ಮಾತನಾಡಬೇಕಾಗುತ್ತದೆ ಎನ್ನುವ ಯಾವ ಅಂದಾಜು ಇರಲಿಲ್ಲ. ಪುನೀತ್ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದು ವಿಶಾಲ್ ಹೇಳಿದರು. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ವಿಶಾಲ್ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಸಿನಿಮಾದಲ್ಲಿ ನಾಯಕರಾಗಿರುವ ಜತೆ ಪುನೀತ್ ನಿಜಜೀವನದಲ್ಲಿಯೂ ನಾಯಕರಾಗಿ ಕೆಲಸ ಮಾಡಿಕೊಂಡು ಬಂದವರು. ಅನಾಥರು, ಮಾರಕ ರೋಗಗಳಿಂದ ಬಳಲುತ್ತಿರುವವರ ಸಹಾಯಕ್ಕೆ ಧಾವಿಸುತ್ತಿದ್ದರು. ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.
ಪವರ್ ಸ್ಟಾರ್ ಎಂದು ಜನರಿಂದ ಕರೆಸಿಕೊಳ್ಳುವ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಇಡೀ ಕರ್ನಾಟಕ ಸೇರಿ ಎಲ್ಲ ಚಿತ್ರರಂಗಗಳು ಕಂಬನಿ ಮಿಡಿದಿದ್ದವು. ಭಾನುವಾರ ಬೆಳಗ್ಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…