ಬೆಂಗಳೂರು: ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ್ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ಕುಮಾರ್, ನೀವೆಲ್ಲರೂ ಸೇರಿ ನನಗೊಂದು ಸಹಾಯ ಮಾಡಿ. ನನ್ನನ್ನು ಕಳಿಸಿಕೊಟ್ಟು ಅವನನ್ನು ವಾಪಸ್ ಕರೆಸಿಕೊಳ್ಳಿ ಪ್ಲೀಸ್. ಪುನೀತ್ ಅವರನ್ನು ಹೂತ್ತಿಲ್ಲ, ಬಿತ್ತಿದ್ದೇವೆ. ಮುಂದೆ ಪುನೀತ್ ರೀತಿ ಇರುವ ನೂರಾರು ಜನ ಹುಟ್ಟಿ ಬರುತ್ತಾರೆ. ಹುಟ್ಟುವಾಗ ನನ್ನ ತಮ್ಮನಾಗಿ ಬಂದ. ವಾಪಸ್ ಹೋಗುವಾಗ ತಂದೆಯಾಗಿ ಹೋದ. ಹೇಗೆ ಬದುಕಬೇಕು ಎಂಬುದನ್ನು ನನಗೂ ಮತ್ತು ಶಿವಣ್ಣನಿಗೂ ತಿಳಿಸಿಕೊಟ್ಟು ಹೋದ. ದಯವಿಟ್ಟು ಬಂದುಬಿಡು ಕಂದಾ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.
ಇಷ್ಟು ದಿನ ಈ ನೋವನ್ನು ತಡೆದುಕೊಂಡಿದ್ದೆ. ನಾನು ಕಣ್ಣೀರು ಹಾಕಿದರೆ ಅಪ್ಪು ಪತ್ನಿ ಅಶ್ವಿನಿ, ಮಕ್ಕಳು ನೊಂದುಕೊಳ್ಳುತ್ತಾರೆ. ನನಗೆ ಮತ್ತು ಶಿವಣ್ಣನಿಗೆ ಮುಖ ನೋಡಿಕೊಳ್ಳಲು ನಾಚಿಕೆಯಾಗುತ್ತಿದೆ. ನಾವು ಅವನನ್ನು ಕಳುಹಿಸಿ ಕೊಡಬೇಕಾಯಿಲ್ಲ. ಇಂಥಹ ಒಂದು ದಿನ ಬೇಕಾ? ಎಂದು ನಮಗೆ ಬೇಸರವಾಯಿತ್ತು. ನಮ್ಮ ದುಃಖವನ್ನು ಹೇಳಿಕೊಳ್ಳೋಣ ಎಂದರೆ ಅಪ್ಪುನನ್ನು ಅಪ್ಪ ಅಮ್ಮ ಹತ್ತಿರವೇ ಮಲಗಿಸಿ ಬಿಟ್ಟೆವು. ನಿನ್ನ ಜಾಗಕ್ಕೆ ನಾನು ಬರುತ್ತೇನೆ ವಾಪಸ್ ಬಂದು ಬಿಡು. ಈ ನೋವು ಮರೆಯುವ ಶಕ್ತಿ ಕೊಡು ಅಂತ ದೇವರಲ್ಲಿ ಕೇಳಲ್ಲ. ಈ ನೋವಿನ ಜೊತೆಗೆ ಬದುಕುವ ಶಕ್ತಿ ಕೊಡು ಅಂತ ಕೇಳುತ್ತೇನೆ. ಅವನು ನನ್ನ ಎದೆಯೊಳಗೆ ಇದ್ದಾನೆ ಎಂದು ರಾಘವೇಂದ್ರ ರಾಜ್ಕುಮಾರ್ ಹೇಳಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…