ಬೆಂಗಳೂರು: ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ್ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ಕುಮಾರ್, ನೀವೆಲ್ಲರೂ ಸೇರಿ ನನಗೊಂದು ಸಹಾಯ ಮಾಡಿ. ನನ್ನನ್ನು ಕಳಿಸಿಕೊಟ್ಟು ಅವನನ್ನು ವಾಪಸ್ ಕರೆಸಿಕೊಳ್ಳಿ ಪ್ಲೀಸ್. ಪುನೀತ್ ಅವರನ್ನು ಹೂತ್ತಿಲ್ಲ, ಬಿತ್ತಿದ್ದೇವೆ. ಮುಂದೆ ಪುನೀತ್ ರೀತಿ ಇರುವ ನೂರಾರು ಜನ ಹುಟ್ಟಿ ಬರುತ್ತಾರೆ. ಹುಟ್ಟುವಾಗ ನನ್ನ ತಮ್ಮನಾಗಿ ಬಂದ. ವಾಪಸ್ ಹೋಗುವಾಗ ತಂದೆಯಾಗಿ ಹೋದ. ಹೇಗೆ ಬದುಕಬೇಕು ಎಂಬುದನ್ನು ನನಗೂ ಮತ್ತು ಶಿವಣ್ಣನಿಗೂ ತಿಳಿಸಿಕೊಟ್ಟು ಹೋದ. ದಯವಿಟ್ಟು ಬಂದುಬಿಡು ಕಂದಾ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.
ಇಷ್ಟು ದಿನ ಈ ನೋವನ್ನು ತಡೆದುಕೊಂಡಿದ್ದೆ. ನಾನು ಕಣ್ಣೀರು ಹಾಕಿದರೆ ಅಪ್ಪು ಪತ್ನಿ ಅಶ್ವಿನಿ, ಮಕ್ಕಳು ನೊಂದುಕೊಳ್ಳುತ್ತಾರೆ. ನನಗೆ ಮತ್ತು ಶಿವಣ್ಣನಿಗೆ ಮುಖ ನೋಡಿಕೊಳ್ಳಲು ನಾಚಿಕೆಯಾಗುತ್ತಿದೆ. ನಾವು ಅವನನ್ನು ಕಳುಹಿಸಿ ಕೊಡಬೇಕಾಯಿಲ್ಲ. ಇಂಥಹ ಒಂದು ದಿನ ಬೇಕಾ? ಎಂದು ನಮಗೆ ಬೇಸರವಾಯಿತ್ತು. ನಮ್ಮ ದುಃಖವನ್ನು ಹೇಳಿಕೊಳ್ಳೋಣ ಎಂದರೆ ಅಪ್ಪುನನ್ನು ಅಪ್ಪ ಅಮ್ಮ ಹತ್ತಿರವೇ ಮಲಗಿಸಿ ಬಿಟ್ಟೆವು. ನಿನ್ನ ಜಾಗಕ್ಕೆ ನಾನು ಬರುತ್ತೇನೆ ವಾಪಸ್ ಬಂದು ಬಿಡು. ಈ ನೋವು ಮರೆಯುವ ಶಕ್ತಿ ಕೊಡು ಅಂತ ದೇವರಲ್ಲಿ ಕೇಳಲ್ಲ. ಈ ನೋವಿನ ಜೊತೆಗೆ ಬದುಕುವ ಶಕ್ತಿ ಕೊಡು ಅಂತ ಕೇಳುತ್ತೇನೆ. ಅವನು ನನ್ನ ಎದೆಯೊಳಗೆ ಇದ್ದಾನೆ ಎಂದು ರಾಘವೇಂದ್ರ ರಾಜ್ಕುಮಾರ್ ಹೇಳಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…