ಪುರಸಭಾ ಚುನಾವಣೆ ಬಿಜೆಪಿ ಪಾಲಿಗೆ ಒಳಿದು ಬರಲಿದೆ: ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ
ಪುರಸಭಾ ಚುನಾವಣೆ ಬಿಜೆಪಿ ಪಾಲಿಗೆ ಒಳಿದು ಬರಲಿದೆ: ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ
ಕಾಪು : ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಪತ್ರಿಕಾಗೋಷ್ಠಿ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿ”ರಾಜ್ಯದಲ್ಲಿ ಕೇಂದ್ರದಲ್ಲಿ ಹಾಗೂ ಉಡುಪಿ ಜಿಲ್ಲೆ ಮತ್ತು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಹವಾ ಧನಾತ್ಮಕವಾಗಿದೆ ಮಾತ್ರವಲ್ಲದೆ ಇಲ್ಲಿನ ಜನ ಬಿಜೆಪಿ ಪಕ್ಷದ ಮೇಲೆ ವಿಶ್ವಾಸ ಇರಿಸಿದ್ದಾರೆ ಹಾಗಾಗಿ ಈ ಸಲದ ಪುರಸಭೆ ಬಿಜೆಪಿ ಪಾಲಿಗೆ ಒಲಿದುಬರಲಿದೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದಿರುವುದು ಅತ್ಯಂತ ವರ್ಷ ತಂದಿದೆ ಸಮಸ್ತ ಜನ ಇದನ್ನು ಸ್ವಾಗತಿಸುತ್ತಾರೆ ಮತ್ತು ಮಾಜಿ ಸಿಎಂ ಸಿದ್ದ ರಾಮಯ್ಯ ಒಬ್ಬ ದಲಿತ ವಿರೋಧಿ ಕಾಂಗ್ರೆಸ್ ಪಾರ್ಟಿ ದಲಿತರನ್ನು ದಮನ ಮಾಡುತ್ತಿದೆ ,ಮತಬ್ಯಾಂಕಿಗಾಗಿ ಕಾಂಗ್ರೆಸ್ ದಲಿತರನ್ನು ಬಳಸಿಕೊಳ್ಳುವಲ್ಲಿ ಯತ್ನಿಸುತ್ತಿದೆ ಆದರೇ ಅವರು ಈಗ ವಿದ್ಯಾವಂತರು ಸಾಮಾನ್ಯ ಪ್ರಜ್ಞೆ ಇದೆ ಎಂದರು.
500ಕೋಟಿ ರೂಪಾಯಿ ಅನುದಾನ ಸರ್ಕಾರ ಎಸ್.ಸಿ.ಎಸ್ಟಿ ಸಮುದಾಯಕ್ಕೆ ನೀಡಿರುವುದು ಶ್ಲಾಘನೀಯ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಎಸ್ ಸಿ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರಬಾಬು,ಜಗದೀಶ್ ಕ್ತ್ರಾಷಧ್ಯಕ್ಷ ಶ್ರೀಕಾಂತ್ ನಾಯಕ್ ಉಪಸ್ಥಿತರಿದ್ದರು.

