ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳನ್ನು ಇಂದು (ಜೂ.13) ತೆರೆಯಲಾಗಿದೆ.
ಚುನಾವಣೆಗೂ ಮುನ್ನ ಬಿಜೆಪಿ ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ತೆರೆಯುವುದಾಗಿ ಹೆಳಿತ್ತು. ಇದೀಗ ನೂತನವಾಗಿ ರಚನೆಯಾದ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ನೆರವೇರಿಸಿದೆ. ಬೆಳಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಪುರಿ ಸಂಸದ ಸಂಬಿತ್ ಪಾತ್ರ ಸೇರಿದಂತೆ ಬಿಜೆಪಿಯ ನಾಯಕರು ತೆರಳಿ ದೇವಾಲಯದ ದ್ವಾರಗಳನ್ನು ತೆರೆಯುವ ಮಹತ್ವದ ಕ್ಷಣದಲ್ಲಿ ಭಾಗಿಯಾಗಿದ್ದರು.
ಮಾಂಝಿ ಅವರು ಬುಧವಾರದ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮುಚ್ಚಲ್ಪಟ್ಟಿರುವ ಪವಿತ್ರ ದೇಗುಲದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ಮತ್ತೆ ತೆರೆಯುವ ಪ್ರಸ್ತಾಪವನ್ನು ಅನುಮೋದಿಸಿದರು. ಅಲ್ಲದೇ 12ನೇ ಶತಮಾನದ ಈ ದೇಗುಲದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 500 ಕೋಟಿ ರೂ. ಮೌಲ್ಯದ ಕಾರ್ಪಸ್ ನಿಧಿಯನ್ನು ಸ್ಥಾಪಿಸುವುದಾಗಿ ಕ್ಯಾಬಿನೆಟ್ ಘೋಷಿಸಿತು.
ಪುರಿಯ ಜಗನ್ನಾಥ ದೇವಾಲಯದಲ್ಲಿ ನಾಲ್ಕು ದ್ವಾರಗಳಿವೆ. ಅವುಗಳೆಂದರೆ ಸಿಂಹದ್ವಾರ, ಅಶ್ವದ್ವಾರ, ವ್ಯಾಘ್ರದ್ವಾರ, ಮತ್ತು ಹಸ್ತಿದ್ವಾರ. ಈ ದ್ವಾರಗಳು ದೇವಾಲಯದ ನಾಲ್ಕು ಬದಿಗಳಲ್ಲಿದೆ. ಕೋವಿಡ್ ಹರಡುತ್ತಿದ್ದ ಸಮಯದಲ್ಲಿ ಈ ಬಾಗಿಲುಗಳನ್ನು ಮುಚ್ಚಲಾಗಿತ್ತು. ನಂತರ, ಭಕ್ತರಿಗೆ ಸಿಂಹದ್ವಾರದ ಮೂಲಕ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಇದರಿಂದಾಗಿ ಭಾರೀ ಜನದಟ್ಟಣೆಯಿಂದ ಭಕ್ತರು ಸಂಕಷ್ಟಪಡುವಂತಾಗಿತ್ತು. ಈ ಎಲ್ಲಾ ದ್ವಾರಗಳನ್ನು ತೆರೆಯುವುದು ಬಿಜೆಪಿಯ ದೊಡ್ಡ ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.
ಬುಧವಾರ (ಜೂ.12) ಭುವನೇಶ್ವರದಲ್ಲಿ ಒಡಿಶಾದ (Odisha) ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮಾಝಿ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಭಾಗವಹಿಸಿದ್ದರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…