ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ನಾಲ್ಕು ದ್ವಾರಗಳನ್ನು ಇಂದು (ಜೂ.13) ತೆರೆಯಲಾಗಿದೆ.
ಚುನಾವಣೆಗೂ ಮುನ್ನ ಬಿಜೆಪಿ ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ತೆರೆಯುವುದಾಗಿ ಹೆಳಿತ್ತು. ಇದೀಗ ನೂತನವಾಗಿ ರಚನೆಯಾದ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ನೆರವೇರಿಸಿದೆ. ಬೆಳಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಪುರಿ ಸಂಸದ ಸಂಬಿತ್ ಪಾತ್ರ ಸೇರಿದಂತೆ ಬಿಜೆಪಿಯ ನಾಯಕರು ತೆರಳಿ ದೇವಾಲಯದ ದ್ವಾರಗಳನ್ನು ತೆರೆಯುವ ಮಹತ್ವದ ಕ್ಷಣದಲ್ಲಿ ಭಾಗಿಯಾಗಿದ್ದರು.
ಮಾಂಝಿ ಅವರು ಬುಧವಾರದ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮುಚ್ಚಲ್ಪಟ್ಟಿರುವ ಪವಿತ್ರ ದೇಗುಲದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ಮತ್ತೆ ತೆರೆಯುವ ಪ್ರಸ್ತಾಪವನ್ನು ಅನುಮೋದಿಸಿದರು. ಅಲ್ಲದೇ 12ನೇ ಶತಮಾನದ ಈ ದೇಗುಲದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 500 ಕೋಟಿ ರೂ. ಮೌಲ್ಯದ ಕಾರ್ಪಸ್ ನಿಧಿಯನ್ನು ಸ್ಥಾಪಿಸುವುದಾಗಿ ಕ್ಯಾಬಿನೆಟ್ ಘೋಷಿಸಿತು.
ಪುರಿಯ ಜಗನ್ನಾಥ ದೇವಾಲಯದಲ್ಲಿ ನಾಲ್ಕು ದ್ವಾರಗಳಿವೆ. ಅವುಗಳೆಂದರೆ ಸಿಂಹದ್ವಾರ, ಅಶ್ವದ್ವಾರ, ವ್ಯಾಘ್ರದ್ವಾರ, ಮತ್ತು ಹಸ್ತಿದ್ವಾರ. ಈ ದ್ವಾರಗಳು ದೇವಾಲಯದ ನಾಲ್ಕು ಬದಿಗಳಲ್ಲಿದೆ. ಕೋವಿಡ್ ಹರಡುತ್ತಿದ್ದ ಸಮಯದಲ್ಲಿ ಈ ಬಾಗಿಲುಗಳನ್ನು ಮುಚ್ಚಲಾಗಿತ್ತು. ನಂತರ, ಭಕ್ತರಿಗೆ ಸಿಂಹದ್ವಾರದ ಮೂಲಕ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಇದರಿಂದಾಗಿ ಭಾರೀ ಜನದಟ್ಟಣೆಯಿಂದ ಭಕ್ತರು ಸಂಕಷ್ಟಪಡುವಂತಾಗಿತ್ತು. ಈ ಎಲ್ಲಾ ದ್ವಾರಗಳನ್ನು ತೆರೆಯುವುದು ಬಿಜೆಪಿಯ ದೊಡ್ಡ ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.
ಬುಧವಾರ (ಜೂ.12) ಭುವನೇಶ್ವರದಲ್ಲಿ ಒಡಿಶಾದ (Odisha) ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮಾಝಿ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಭಾಗವಹಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…