Featured

ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್ – ಒಡಿಶಾ ಬಿಜೆಪಿ ಸರ್ಕಾರದಿಂದ ಮೊದಲ ಭರವಸೆ ಈಡೇರಿಕೆ – vishwanews24

ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್ – ಒಡಿಶಾ ಬಿಜೆಪಿ ಸರ್ಕಾರದಿಂದ ಮೊದಲ ಭರವಸೆ ಈಡೇರಿಕೆ

ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ  ನಾಲ್ಕು ದ್ವಾರಗಳನ್ನು ಇಂದು (ಜೂ.13) ತೆರೆಯಲಾಗಿದೆ.

ಚುನಾವಣೆಗೂ ಮುನ್ನ ಬಿಜೆಪಿ ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ತೆರೆಯುವುದಾಗಿ ಹೆಳಿತ್ತು. ಇದೀಗ ನೂತನವಾಗಿ ರಚನೆಯಾದ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ನೆರವೇರಿಸಿದೆ. ಬೆಳಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ  ಪುರಿ ಸಂಸದ ಸಂಬಿತ್ ಪಾತ್ರ ಸೇರಿದಂತೆ ಬಿಜೆಪಿಯ ನಾಯಕರು ತೆರಳಿ ದೇವಾಲಯದ ದ್ವಾರಗಳನ್ನು ತೆರೆಯುವ ಮಹತ್ವದ ಕ್ಷಣದಲ್ಲಿ ಭಾಗಿಯಾಗಿದ್ದರು.

 

ಮಾಂಝಿ ಅವರು ಬುಧವಾರದ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮುಚ್ಚಲ್ಪಟ್ಟಿರುವ ಪವಿತ್ರ ದೇಗುಲದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ಮತ್ತೆ ತೆರೆಯುವ ಪ್ರಸ್ತಾಪವನ್ನು ಅನುಮೋದಿಸಿದರು. ಅಲ್ಲದೇ 12ನೇ ಶತಮಾನದ ಈ ದೇಗುಲದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 500 ಕೋಟಿ ರೂ. ಮೌಲ್ಯದ ಕಾರ್ಪಸ್ ನಿಧಿಯನ್ನು ಸ್ಥಾಪಿಸುವುದಾಗಿ ಕ್ಯಾಬಿನೆಟ್ ಘೋಷಿಸಿತು.

ಪುರಿಯ ಜಗನ್ನಾಥ ದೇವಾಲಯದಲ್ಲಿ ನಾಲ್ಕು ದ್ವಾರಗಳಿವೆ. ಅವುಗಳೆಂದರೆ ಸಿಂಹದ್ವಾರ, ಅಶ್ವದ್ವಾರ, ವ್ಯಾಘ್ರದ್ವಾರ, ಮತ್ತು ಹಸ್ತಿದ್ವಾರ. ಈ ದ್ವಾರಗಳು ದೇವಾಲಯದ ನಾಲ್ಕು ಬದಿಗಳಲ್ಲಿದೆ. ಕೋವಿಡ್ ಹರಡುತ್ತಿದ್ದ ಸಮಯದಲ್ಲಿ ಈ ಬಾಗಿಲುಗಳನ್ನು ಮುಚ್ಚಲಾಗಿತ್ತು. ನಂತರ, ಭಕ್ತರಿಗೆ ಸಿಂಹದ್ವಾರದ ಮೂಲಕ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಇದರಿಂದಾಗಿ ಭಾರೀ ಜನದಟ್ಟಣೆಯಿಂದ ಭಕ್ತರು ಸಂಕಷ್ಟಪಡುವಂತಾಗಿತ್ತು. ಈ ಎಲ್ಲಾ ದ್ವಾರಗಳನ್ನು ತೆರೆಯುವುದು ಬಿಜೆಪಿಯ ದೊಡ್ಡ ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.

ಬುಧವಾರ (ಜೂ.12) ಭುವನೇಶ್ವರದಲ್ಲಿ ಒಡಿಶಾದ (Odisha) ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮಾಝಿ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಭಾಗವಹಿಸಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

18 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

19 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago