Featured

ಪುರಿ ಜಗನ್ನಾಥ, ದ್ವಾರಕಾ, ದಕ್ಷಿಣದ ಕ್ಷೇತ್ರಗಳ ಯಾತ್ರೆಗೆ ಸಹಾಯಧನ ಘೋಷಣೆ – vishwanews24

ಪುರಿ ಜಗನ್ನಾಥ, ದ್ವಾರಕಾ, ದಕ್ಷಿಣದ ಕ್ಷೇತ್ರಗಳ ಯಾತ್ರೆಗೆ ಸಹಾಯಧನ ಘೋಷಣೆ

ಬೆಂಗಳೂರು: ಕರ್ನಾಟಕದ ಭಕ್ತರಿಗೆ, ತೀರ್ಥಯಾತ್ರಿಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ವರ್ಷ ಗಿಫ್ಟ್ ನೀಡಿದೆ. ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್​​ಗಳಿಗೆ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಪುರಿ ಜಗನ್ನಾಥ, ದ್ವಾರಕಾ ಹಾಗೂ ದಕ್ಷಿಣದ ಕ್ಷೇತ್ರಗಳಿಗೆ ತೆರಳುವವರಿಗೆ ಸಹಾಯಧನ ಘೋಷಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ದಕ್ಷಿಣದ ತೀರ್ಥಯಾತ್ರಾ ಸ್ಥಳಗಳು ಯಾವುವೆಲ್ಲ?
ರಾಮೇಶ್ವರ, ಕನ್ಯಕುಮಾರಿ, ಮಧುರೈ, ತಿರುವನಂತಪುರಂಗೆ ಆರು ದಿನಗಳ ತೀರ್ಥಯಾತ್ರೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಒಟ್ಟು 25,000 ರೂ. ವೆಚ್ಚವಾಗುತ್ತದೆ. ಈ ಪೈಕಿ ಸರ್ಕಾರದಿಂದ 10,000 ರೂ. ಸಬ್ಸಿಡಿ ದೊರೆಯಲಿದೆ. 5,000 ರೂ. ಸಹಾಯಧನ ಸೇರಿ 15000 ರೂ. ಭರಿಸಲಾಗುತ್ತದೆ. ಯಾತ್ರಾರ್ಥಿಗಳು 10,000 ರೂ. ಮಾತ್ರ ಕೊಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದ್ವಾರಕಾ ಯಾತ್ರೆ, ಪುರಿ ಜಗನ್ನಾಥ ದರ್ಶನ ಪ್ಯಾಕೇಜ್ ವಿವರ
ದ್ವಾರಕಾ ನಾಗೇಶ್ವರ-ಸೋಮನಾಥ್-ತ್ರಯಂಬಕೇಶ್ವರ ಒಳಗೊಂಡ 8 ದಿನಗಳ ಯಾತ್ರಾ ಪ್ಯಾಕೇಜ್ ಇರಲಿದೆ. ಪುರಿ- ಕೊನಾರ್ಕ್, ಗಂಗಾಸಾಗರ್, ಕೊಲ್ಕತ್ತಾ ಒಳಗೊಂಡ 8 ದಿನಗಳ ಯಾತ್ರಾ ಪ್ಯಾಕೇಜ್ ಒಟ್ಟು‌ ಮೊತ್ತ 32,500 ರೂ. ಆಗಿದೆ. ಈ ಪೈಕಿ 17,500 ರೂ. ಸರ್ಕಾರದಿಂದ ಭರಿಸಲಾಗುತ್ತದೆ. ಉಳಿದ 15,000 ರೂ. ಮಾತ್ರ ಯಾತ್ರಿಕರು ಪಾವತಿಸಬೇಕು.

ಏನೇನು ವಿಶೇಷ ಸೌಲಭ್ಯಗಳಿವೆ?
ಪ್ರಯಾಣಿಸುವಾಗ ಟ್ರೈನ್ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಆಹಾರವನ್ನು ನೀಡಲಾಗುತ್ತದೆ. ಈ ಪ್ಯಾಕೇಜ್​ನಲ್ಲಿ 3ಟೈರ್ ಎಸಿ ರೈಲಿನಲ್ಲಿ ಪ್ರಯಾಣಿಸಬಹುದು. ಊಟ, ವಸತಿ, ಸ್ಥಳೀಯ ಸಾರಿಗೆ ಹಾಗೂ ದರ್ಶನ ವ್ಯವಸ್ಥೆ ಇರುತ್ತದೆ. ಯಾತ್ರಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ವೈದ್ಯಕೀಯ ಸಹಾಯ ವ್ಯವಸ್ಥೆ ಇರುತ್ತದೆ. ರೈಲಿನಲ್ಲಿ ವೈದ್ಯರು, ನರ್ಸ್​​ಗಳ ವ್ಯವಸ್ಥೆ ಮಾಡಲಾಗಿದೆ.

ಯಾತ್ರೆಯ ರೂಟ್ ಮ್ಯಾಪ್ ಹೇಗಿರಲಿದೆ?
ದಕ್ಷಿಣ ಯಾತ್ರಿಗಳು ಹತ್ತುವ ಹಾಗೂ ಇಳಿಯುವ ಸ್ಥಳಗಳು; ಬೆಂಗಳೂರು ಸರ್​ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ಣಾಣ, ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು ಆಗಿವೆ.

ಯಾತ್ರೆಯ ದಿನಾಂಕ
ಯಾತ್ರೆ ಹೊರಡುವ ದಿನಾಂಕ: 25-1-2025 ಆಗಿದ್ದು ವಾಪಸ್ ಬರುವ ದಿನಾಂಕ 30-1-2025 ಆಗಿದೆ.

ಪುರಿ ಜಗನ್ನಾಥ ದರ್ಶನ ಹಾಗೂ ದ್ವಾರಕಾ ಯಾತ್ರಿಗಳು ಹತ್ತುವ ಮತ್ತು ಇಳಿಯುವ ಸ್ಥಳಗಳು; ಬೆಂಗಳೂರು ಸರ್​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹಾವೇರಿ, ಬೆಳಗಾವಿ.

ಇದನ್ನೂ ಓದಿ: ಸಿಬ್ಬಂದಿ ಸುರಕ್ಷತೆಗಾಗಿ ಹೊಸ ಹೆಜ್ಜೆ ಇಟ್ಟ ಬೆಂಗಳೂರಿನ ಜಯದೇವ ಆಸ್ಪತ್ರೆ..!

ದ್ವಾರಕಾ ಯಾತ್ರೆ ಹೊರಡುವ ದಿನಾಂಕ 06-1-2025 ಆಗಿದ್ದು, ಹಿಂತಿರುಗುವ ದಿನಾಂಕ 13-1-2025 ಆಗಿದೆ. ಪುರಿಜಗನ್ನಾಥ ದರ್ಶನಕ್ಕೆ ಹೊರಡುವ ದಿನಾಂಕ ದಿನಾಂಕ: 3-2-2025 ಆಗಿದ್ದು, ವಾಪಸಾಗುವ ದಿನಾಂಕ 10-02-2025 ಆಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago