ನವದೆಹಲಿ,:ಪುಲ್ವಾಮಾ ಉಗ್ರ ದಾಳಿಯ ಪ್ರತಿಕಾರವಾಗಿ ಭಾರತವೂ ಪಾಕ್ ಉಗ್ರ ನೆಲೆಗಳ ಮೇಲೆ ನಡೆಸಿದ ಏರ್ ಸ್ಟ್ರೈಕ್ ಪ್ರತೀಕಾರದ ದಾಳಿಯಲ್ಲಿ ಉಗ್ರ ಸಂಘಟನೆಯ ಮೂರು ಕಂಟ್ರೋಲ್ ರೂಂ ಸರ್ವನಾಶವಾಗಿದೆ ಎಂದು ತಿಳಿದು ಬಂದಿದೆ. ಕೇವಲ 21 ನಿಮಿಷಗಳ ದಾಳಿಯಲ್ಲಿ ಸುಮಾರು 500 ಮೀಟರ್ ನಷ್ಟು ಸ್ಥಳ ಸಂಪೂರ್ಣವಾಗಿ ದ್ವಂಸವಾಗಿದೆ.
ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆಯ ಅಡಗು ದಾಣಗಳ ಮೇಲೆ ಕಳೆದ ರಾತ್ರಿ 3.30ರ ಸುಮಾರಿಗೆ 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆಜಿ ಬಾಂಬ್ ದಾಳಿ ಮಾಡಿದ್ದು ಪರಿಣಾಮ 500 ಮೀಟರ್ ಪ್ರದೇಶ ಸಂಪೂರ್ಣ ಸರ್ವನಾಶವಾಗಿದೆ ಎಂದು ತಿಳಿದುಬಂದಿದೆ.
ಭಾರತೀಯ ವಾಯುಸೇನೆಯ ಮಿರಾಜ್ 2000 ಯುದ್ಧ ವಿಮಾನಗಳನ್ನು ದಾಳಿ ಸಂದರ್ಭ ಬಳಕೆ ಮಾಡಿದ್ದು, ಕ್ಷಿಪ್ರ ವಾಯುದಾಳಿಯಲ್ಲಿ ಆಕ್ರಮಿತ ಕಾಶ್ಮೀರ ಭಾಗದಲ್ಲಿದ್ದ ಜೈಶ್-ಎ-ಮಹಮ್ಮದ್ ಉಗ್ರಗಾಮಿ 3 ನೆಲೆಗಳನ್ನು ಸರ್ವನಾಶ ಮಾಡಿದೆ.
ಗಡಿನಿಯಂತ್ರಣ ರೇಖೆಯನ್ನು ದಾಟಿದ ವಾಯುಸೇನೆಯ ವಿರಾಜ್ ಫೈಟರ್ ಜೆಟ್ ಗಳು ಪಾಕಿಸ್ಥಾನದ ರಾಡಾರ್ ವ್ಯವಸ್ಥೆಯನ್ನು ಜಾಮ್ ಗೊಳಿಸಿ ಜೈಶ್ ನ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಮೊದಲ ದಾಳಿಯನ್ನು ಮುಂಜಾನೆ 3.45ರ ವೇಳೆಗೆ ಬಾಲ್ಕೋಟ್ ಮೇಲೆ ಮಾಡಿದೆ. ನಂತರ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ.
ಭಾರತೀಯ ಸೇನೆಯ ಯುದ್ಧ ವಿಮಾನ ಮುಜಾಫ್ಫರಾಬಾದ್ ಗೆ ಬಂದಿತ್ತು. ಈ ವೇಳೆ ಪಾಕಿಸ್ತಾನ ಸೇನೆ ತಕ್ಷಣವೇ ಕಾರ್ಯಾಚರಣೆ ಮಾಡಿತ್ತು. ಇದರಿಂದ ಭಾರತದ ಯುದ್ಧ ವಿಮಾನ ವಾಪಸಾಗಿದೆ ಎಂದು ಮೇಜರ್ ಜನರಲ್ ಅಸೀಫ್ ಗಫರ್ ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…