ನವದೆಹಲಿ,:ಪುಲ್ವಾಮಾ ಉಗ್ರ ದಾಳಿಯ ಪ್ರತಿಕಾರವಾಗಿ ಭಾರತವೂ ಪಾಕ್ ಉಗ್ರ ನೆಲೆಗಳ ಮೇಲೆ ನಡೆಸಿದ ಏರ್ ಸ್ಟ್ರೈಕ್ ಪ್ರತೀಕಾರದ ದಾಳಿಯಲ್ಲಿ ಉಗ್ರ ಸಂಘಟನೆಯ ಮೂರು ಕಂಟ್ರೋಲ್ ರೂಂ ಸರ್ವನಾಶವಾಗಿದೆ ಎಂದು ತಿಳಿದು ಬಂದಿದೆ. ಕೇವಲ 21 ನಿಮಿಷಗಳ ದಾಳಿಯಲ್ಲಿ ಸುಮಾರು 500 ಮೀಟರ್ ನಷ್ಟು ಸ್ಥಳ ಸಂಪೂರ್ಣವಾಗಿ ದ್ವಂಸವಾಗಿದೆ.
ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆಯ ಅಡಗು ದಾಣಗಳ ಮೇಲೆ ಕಳೆದ ರಾತ್ರಿ 3.30ರ ಸುಮಾರಿಗೆ 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆಜಿ ಬಾಂಬ್ ದಾಳಿ ಮಾಡಿದ್ದು ಪರಿಣಾಮ 500 ಮೀಟರ್ ಪ್ರದೇಶ ಸಂಪೂರ್ಣ ಸರ್ವನಾಶವಾಗಿದೆ ಎಂದು ತಿಳಿದುಬಂದಿದೆ.
ಭಾರತೀಯ ವಾಯುಸೇನೆಯ ಮಿರಾಜ್ 2000 ಯುದ್ಧ ವಿಮಾನಗಳನ್ನು ದಾಳಿ ಸಂದರ್ಭ ಬಳಕೆ ಮಾಡಿದ್ದು, ಕ್ಷಿಪ್ರ ವಾಯುದಾಳಿಯಲ್ಲಿ ಆಕ್ರಮಿತ ಕಾಶ್ಮೀರ ಭಾಗದಲ್ಲಿದ್ದ ಜೈಶ್-ಎ-ಮಹಮ್ಮದ್ ಉಗ್ರಗಾಮಿ 3 ನೆಲೆಗಳನ್ನು ಸರ್ವನಾಶ ಮಾಡಿದೆ.
ಗಡಿನಿಯಂತ್ರಣ ರೇಖೆಯನ್ನು ದಾಟಿದ ವಾಯುಸೇನೆಯ ವಿರಾಜ್ ಫೈಟರ್ ಜೆಟ್ ಗಳು ಪಾಕಿಸ್ಥಾನದ ರಾಡಾರ್ ವ್ಯವಸ್ಥೆಯನ್ನು ಜಾಮ್ ಗೊಳಿಸಿ ಜೈಶ್ ನ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಮೊದಲ ದಾಳಿಯನ್ನು ಮುಂಜಾನೆ 3.45ರ ವೇಳೆಗೆ ಬಾಲ್ಕೋಟ್ ಮೇಲೆ ಮಾಡಿದೆ. ನಂತರ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ.
ಭಾರತೀಯ ಸೇನೆಯ ಯುದ್ಧ ವಿಮಾನ ಮುಜಾಫ್ಫರಾಬಾದ್ ಗೆ ಬಂದಿತ್ತು. ಈ ವೇಳೆ ಪಾಕಿಸ್ತಾನ ಸೇನೆ ತಕ್ಷಣವೇ ಕಾರ್ಯಾಚರಣೆ ಮಾಡಿತ್ತು. ಇದರಿಂದ ಭಾರತದ ಯುದ್ಧ ವಿಮಾನ ವಾಪಸಾಗಿದೆ ಎಂದು ಮೇಜರ್ ಜನರಲ್ ಅಸೀಫ್ ಗಫರ್ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…