ನವದೆಹಲಿ,:ಪುಲ್ವಾಮಾ ಉಗ್ರ ದಾಳಿಯ ಪ್ರತಿಕಾರವಾಗಿ ಭಾರತವೂ ಪಾಕ್ ಉಗ್ರ ನೆಲೆಗಳ ಮೇಲೆ ನಡೆಸಿದ ಏರ್ ಸ್ಟ್ರೈಕ್ ಪ್ರತೀಕಾರದ ದಾಳಿಯಲ್ಲಿ ಉಗ್ರ ಸಂಘಟನೆಯ ಮೂರು ಕಂಟ್ರೋಲ್ ರೂಂ ಸರ್ವನಾಶವಾಗಿದೆ ಎಂದು ತಿಳಿದು ಬಂದಿದೆ. ಕೇವಲ 21 ನಿಮಿಷಗಳ ದಾಳಿಯಲ್ಲಿ ಸುಮಾರು 500 ಮೀಟರ್ ನಷ್ಟು ಸ್ಥಳ ಸಂಪೂರ್ಣವಾಗಿ ದ್ವಂಸವಾಗಿದೆ.
ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆಯ ಅಡಗು ದಾಣಗಳ ಮೇಲೆ ಕಳೆದ ರಾತ್ರಿ 3.30ರ ಸುಮಾರಿಗೆ 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆಜಿ ಬಾಂಬ್ ದಾಳಿ ಮಾಡಿದ್ದು ಪರಿಣಾಮ 500 ಮೀಟರ್ ಪ್ರದೇಶ ಸಂಪೂರ್ಣ ಸರ್ವನಾಶವಾಗಿದೆ ಎಂದು ತಿಳಿದುಬಂದಿದೆ.
ಭಾರತೀಯ ವಾಯುಸೇನೆಯ ಮಿರಾಜ್ 2000 ಯುದ್ಧ ವಿಮಾನಗಳನ್ನು ದಾಳಿ ಸಂದರ್ಭ ಬಳಕೆ ಮಾಡಿದ್ದು, ಕ್ಷಿಪ್ರ ವಾಯುದಾಳಿಯಲ್ಲಿ ಆಕ್ರಮಿತ ಕಾಶ್ಮೀರ ಭಾಗದಲ್ಲಿದ್ದ ಜೈಶ್-ಎ-ಮಹಮ್ಮದ್ ಉಗ್ರಗಾಮಿ 3 ನೆಲೆಗಳನ್ನು ಸರ್ವನಾಶ ಮಾಡಿದೆ.
ಗಡಿನಿಯಂತ್ರಣ ರೇಖೆಯನ್ನು ದಾಟಿದ ವಾಯುಸೇನೆಯ ವಿರಾಜ್ ಫೈಟರ್ ಜೆಟ್ ಗಳು ಪಾಕಿಸ್ಥಾನದ ರಾಡಾರ್ ವ್ಯವಸ್ಥೆಯನ್ನು ಜಾಮ್ ಗೊಳಿಸಿ ಜೈಶ್ ನ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಮೊದಲ ದಾಳಿಯನ್ನು ಮುಂಜಾನೆ 3.45ರ ವೇಳೆಗೆ ಬಾಲ್ಕೋಟ್ ಮೇಲೆ ಮಾಡಿದೆ. ನಂತರ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ.
ಭಾರತೀಯ ಸೇನೆಯ ಯುದ್ಧ ವಿಮಾನ ಮುಜಾಫ್ಫರಾಬಾದ್ ಗೆ ಬಂದಿತ್ತು. ಈ ವೇಳೆ ಪಾಕಿಸ್ತಾನ ಸೇನೆ ತಕ್ಷಣವೇ ಕಾರ್ಯಾಚರಣೆ ಮಾಡಿತ್ತು. ಇದರಿಂದ ಭಾರತದ ಯುದ್ಧ ವಿಮಾನ ವಾಪಸಾಗಿದೆ ಎಂದು ಮೇಜರ್ ಜನರಲ್ ಅಸೀಫ್ ಗಫರ್ ಹೇಳಿದ್ದಾರೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…