Featured

ಪುಲ್ವಾಮಾ ದಾಳಿಯಂತಹ ಘಟನೆಗಳು ಮಾತ್ರ ಬಿಜೆಪಿಯನ್ನು ರಕ್ಷಿಸಬಲ್ಲವು : ಶರದ್ ಪವಾರ್ -Vishwanews24

ಔರಂಗಾಬಾದ್: ಮಹಾರಾಷ್ಟ್ರ ಜನತೆ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದು, ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಔರಂಗಾಬಾದ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಶರದ್ ಪವಾರ್, ಮಹಾರಾಷ್ಟ್ರದಲ್ಲಿ ಜನ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದಾರೆ. ಈಗ ಚುನಾವಣೆಯಾದರೆ ಬಿಜೆಪಿ ಮತ್ತು ಶಿವಸೇನೆ ಸೋಲು ಖಚಿತ. ಇಂತಹ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಂತಹ ಘಟನೆಗಳು ಮಾತ್ರ ಬಿಜೆಪಿಯನ್ನು ರಕ್ಷಿಸಬಲ್ಲವು ಎಂದು ಹೇಳಿದ್ದಾರೆ.

ಬಾಲಾಕೋಟ್ ವಾಯುದಾಳಿ ಮೋದಿ ಜನಪ್ರಿಯತೆಯನ್ನು ಹೆಚ್ಚಿಸಿತು. ಇಂತಹ ಕಾರ್ಯ ಮೋದಿಗೆ ಕರಗತವಾಗಿದೆ. ಕೆಲಸ ಮಾಡದಿದ್ದರೂ ಕೆಲಸ ಮಾಡಿದಂತೆ ಮೋದಿ ಪೋಸ್ ನೀಡಿ ಜನಪ್ರಿಯತೆ ಗಳಿಸುತ್ತಾರೆ. ಆದರೆ ಈ ತಂತ್ರಗಾರಿಕೆ ಮಹಾರಾಷ್ಟ್ರದಲ್ಲಿ ನಡೆಯಲಾರದು. ಹಾಲಿ ದೇವೇಂದ್ರ ಫಡ್ನವಿಸ್ ಸರ್ಕಾರದ ದುರಾಡಳಿತ ಜನರನ್ನು ಹೈರಾಣಾಗಿಸಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಅವರ ಮನಸ್ಥಿತಿ ಬದಲಾಗಬೇಕು ಎಂದರೆ ಮತ್ತೊಂದು ಪುಲ್ವಾಮ ದಾಳಿ ಅಥವಾ ಬಾಲಾಕೋಟ್ ವಾಯುದಾಳಿಯಂತ ಘಟನೆಯಾಗಬೇಕು. ಇಲ್ಲವಾದಲ್ಲಿ ಈ ಸರ್ಕಾರ ಉರುಳುವುದು ಖಚಿತ ಎಂದು ಪವಾರ್ ಹೇಳಿದ್ದಾರೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago