ಇಸ್ಲಾಮಾಬಾದ್ : ಜಮ್ಮುಕಾಶ್ಮೀರದ ಪುಲ್ವಾಮ್ ನಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಸಿಆರ್ ಪಿಎಫ್ 42 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಪಾಕಿಸ್ತಾನ ಈ ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿಕೊಂಡಿದೆ.
‘ಯಾವುದೇ ತನಿಖೆ ನಡೆಸದೆ ಭಾರತದ ಮಾಧ್ಯಮಗಳು ಈ ದಾಳಿಗೆ ಪಾಕ್ ಹೆಸರನ್ನು ಜೋಡಿಸುತ್ತಿರುವುದನ್ನು ನಾವು ಬಲವಾಗಿ ತಿರಿಸ್ಕರಿಸುತ್ತೇವೆ. ಇದೊಂದು ತೀವ್ರ ಆತಂಕದ ವಿಚಾರ’ ಎಂದು ಪಾಕ್ ಸರಕಾರದ ಹೇಳಿಕೆ ತಿಳಿಸಿದೆ.
ಪಾಕ್ ಮೂಲದ ಜೈಷ್ ಎ ಮೊಹಮ್ಮದ್ ಸಂಘಟನೆಯೇ ಈ ಕೃತ್ಯ ಎಸಗಿದ್ದು, ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದು, ಅನೇಕ ಯೋಧರು ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ಇದೊಂದು ಗಂಭೀರವಾಗಿ ಕಾಳಜಿ ವಹಿಸಬೇಕಾದ ಸಂಗತಿ ಎಂದು ಹೇಳಿದೆ.
ವಿಶ್ವದ ಎಲ್ಲೇ ಆಗಲಿ ಹಿಂಸಾಚಾರವನ್ನು ಪಾಕ್ ಖಂಡಿಸುತ್ತದೆ. ಆದರೆ ತನಿಖೆ ನಡೆಸದೆ ಘಟನೆಗೂ ಪಾಕ್ ಗೂ ಸಂಬಂಧವಿದೆ ಎಂಬ ಸರ್ಕಾರದ ಹಾಗೂ ಭಾರತೀಯ ಮಾಧ್ಯಮಗಳ ಹೇಳಿಕೆಗಣ್ನು ತಾನು ತಿರಸ್ಕರಿಸುವುದಾಗಿ ಹೇಳಿದೆ.
ಇದೊಂದು ಹೀನಾತಿಹೀನ ಕೃತ್ಯವಾಗಿದ್ದು ಪಾಕಿಸ್ತಾನ ಮೂಲದ ಜೈಷೆ ಮೊಹಮ್ಮದ್ ಭಯೋತ್ಪಾದಕ ಸಂಘಟನೆ ಕೃತ್ಯವಾಗಿದೆ. ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರ್ ನೇತೃತ್ವದ ಭಯೋತ್ಪಾದಕ ಸಂಘಟನೆ ಇದಾಗಿದೆ. ಈತನಿಗೆ ಪಾಕಿಸ್ತಾನ ಸರಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು ಎಲ್ಲೆಡೆ ಮುಕ್ತವಾಗಿ ಓಡಾಡಿಕೊಂಡಿದ್ದಾನೆ. ತನ್ನ ನೆಲದಿಂದ ಭಯೋತ್ಪಾದಕ ಕೃತ್ಯಗಳನ್ನು ಪ್ರಾಯೋಜಿಸುತ್ತಿರುವ ಈತ ಹಾಗೂ ಇತರ ಉಗ್ರರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳದಿದ್ದಲ್ಲಿ ದಂಡಿಸುವ ಸಂಪೂರ್ಣ ಅಧಿಕಾರ ಭಾರತಕ್ಕಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…