ಇಸ್ಲಾಮಾಬಾದ್ : ಜಮ್ಮುಕಾಶ್ಮೀರದ ಪುಲ್ವಾಮ್ ನಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಸಿಆರ್ ಪಿಎಫ್ 42 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಪಾಕಿಸ್ತಾನ ಈ ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿಕೊಂಡಿದೆ.
‘ಯಾವುದೇ ತನಿಖೆ ನಡೆಸದೆ ಭಾರತದ ಮಾಧ್ಯಮಗಳು ಈ ದಾಳಿಗೆ ಪಾಕ್ ಹೆಸರನ್ನು ಜೋಡಿಸುತ್ತಿರುವುದನ್ನು ನಾವು ಬಲವಾಗಿ ತಿರಿಸ್ಕರಿಸುತ್ತೇವೆ. ಇದೊಂದು ತೀವ್ರ ಆತಂಕದ ವಿಚಾರ’ ಎಂದು ಪಾಕ್ ಸರಕಾರದ ಹೇಳಿಕೆ ತಿಳಿಸಿದೆ.
ಪಾಕ್ ಮೂಲದ ಜೈಷ್ ಎ ಮೊಹಮ್ಮದ್ ಸಂಘಟನೆಯೇ ಈ ಕೃತ್ಯ ಎಸಗಿದ್ದು, ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದು, ಅನೇಕ ಯೋಧರು ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ಇದೊಂದು ಗಂಭೀರವಾಗಿ ಕಾಳಜಿ ವಹಿಸಬೇಕಾದ ಸಂಗತಿ ಎಂದು ಹೇಳಿದೆ.
ವಿಶ್ವದ ಎಲ್ಲೇ ಆಗಲಿ ಹಿಂಸಾಚಾರವನ್ನು ಪಾಕ್ ಖಂಡಿಸುತ್ತದೆ. ಆದರೆ ತನಿಖೆ ನಡೆಸದೆ ಘಟನೆಗೂ ಪಾಕ್ ಗೂ ಸಂಬಂಧವಿದೆ ಎಂಬ ಸರ್ಕಾರದ ಹಾಗೂ ಭಾರತೀಯ ಮಾಧ್ಯಮಗಳ ಹೇಳಿಕೆಗಣ್ನು ತಾನು ತಿರಸ್ಕರಿಸುವುದಾಗಿ ಹೇಳಿದೆ.
ಇದೊಂದು ಹೀನಾತಿಹೀನ ಕೃತ್ಯವಾಗಿದ್ದು ಪಾಕಿಸ್ತಾನ ಮೂಲದ ಜೈಷೆ ಮೊಹಮ್ಮದ್ ಭಯೋತ್ಪಾದಕ ಸಂಘಟನೆ ಕೃತ್ಯವಾಗಿದೆ. ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರ್ ನೇತೃತ್ವದ ಭಯೋತ್ಪಾದಕ ಸಂಘಟನೆ ಇದಾಗಿದೆ. ಈತನಿಗೆ ಪಾಕಿಸ್ತಾನ ಸರಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು ಎಲ್ಲೆಡೆ ಮುಕ್ತವಾಗಿ ಓಡಾಡಿಕೊಂಡಿದ್ದಾನೆ. ತನ್ನ ನೆಲದಿಂದ ಭಯೋತ್ಪಾದಕ ಕೃತ್ಯಗಳನ್ನು ಪ್ರಾಯೋಜಿಸುತ್ತಿರುವ ಈತ ಹಾಗೂ ಇತರ ಉಗ್ರರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳದಿದ್ದಲ್ಲಿ ದಂಡಿಸುವ ಸಂಪೂರ್ಣ ಅಧಿಕಾರ ಭಾರತಕ್ಕಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…