Featured

ಪುಲ್ವಾಮಾ ಹುತಾತ್ಮ ಯೋಧನ ತಂಗಿಯ ವಿವಾಹ : ಅಣ್ಣನ ಸ್ಥಾನ ತುಂಬಿದ ಯೋಧರು – VIshwanews24

ಪುಲ್ವಾಮಾ ಹುತಾತ್ಮ ಯೋಧನ ತಂಗಿಯ ವಿವಾಹ : ಅಣ್ಣನ ಸ್ಥಾನದ ತುಂಬಿದ ಯೋಧರು – VIshwanews24

ಲಕ್ನೋ: ಹುತಾತ್ಮನಾಗಿರುವ ಯೋಧನ ತಂಗಿಯ ವಿವಾಹವನ್ನು ಅಣ್ಣನ ಸ್ಥಾನದಲ್ಲಿ ನಿಂತು ಯೋಧರೇ ಮುಂದೆ ನಿಂತು ಮಾಡಿಸಿ ಗೆಳೆಯನ ಆಸೆಯನ್ನು ನೆರವೇರಿಸಿದ ಹೃದಯಸ್ಪರ್ಶಿ ಘಟನೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದಿದೆ.

2019ರ ಫೆಬ್ರುವರಿ 14ರಂದು ಪುಲ್ವಾಮಾದಲ್ಲಿ ನಡೆದ ಬಾಂಬ್‌ ದಾಳಿಯಲ್ಲಿ ಹುತಾತ್ಮರಾದ ಯೋಧ ಶೈಲೇಂದ್ರ ಪ್ರತಾಪ್‌ ಸಿಂಗ್‌ ಅವರ ಸಹೋದರಿಯ ಮದುವೆಯನ್ನು ಖುದ್ದು ಸಿಆರ್‌ಪಿಎಫ್‌ ಯೋಧರೇ ಸೋದರ ಸ್ಥಾನದಲ್ಲಿ ಮುಂದೆ ನಿಂತು ಮಾಡಿಸಿಕೊಟ್ಟಿದ್ದಾರೆ.

ಮದುವೆಯ ದಿನ ಬೆಳಗ್ಗೆಯೇ ಸಮವಸ್ತ್ರ ಧರಿಸಿದ್ದ ಸಿಆರ್‌ಪಿಎಫ್ ಯೋಧರ ದಂಡೊಂದು ವಧುವನ್ನು ಮಂಟಪಕ್ಕೆ ಕರೆತರುವ ಮೂಲಕ ಸಹೋದರನನ್ನು ಕಳೆದುಕೊಂಡಿರುವ ಭಾವನೆ ಈ ಮದುಮಗಳಿಗೆ ಬರದಂತೆ ನೋಡಿಕೊಂಡರು. ಖುದ್ದು ಮುಂದೆ ನಿಂತು ಎಲ್ಲ ಜವಾಬ್ದಾರಿಯನ್ನೂ ಅಚ್ಚುಕಟ್ಟಾಗಿ ನಿಭಾಯಿಸಿ ವಿವಾಹ ಕಾರ್ಯವನ್ನು ನಡೆಸಿಕೊಟ್ಟರು.

‘ಹುತಾತ್ಮ ಯೋಧ ಶೈಲೇಂದ್ರ ಪ್ರತಾಪ್‌ ಸಿಂಗ್‌ ಅವರ ಸಹೋದರಿಯ ವಿವಾಹ ಕಾರ್ಯಕ್ರಮದಲ್ಲಿ ಹಿರಿಯ ಸಹೋದರರಾಗಿ ಸಿಆರ್‌ಪಿಎಫ್‌ ಯೋಧರು ಪಾಲ್ಗೊಂಡಿದ್ದರು’ ಎಂಬ ಶೀರ್ಷಿಕೆ ಇರುವ ಮದುವೆ ಫೋಟೋಗಳನ್ನು ಸಿಆರ್‌ಪಿಎಫ್‌ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಶೇರ್‌ ಮಾಡಿದೆ.

ಯೋಧರ ಈ ಕಾರ್ಯವನ್ನು ಕಂಡು ಸಿಂಗ್‌ ಅವರ ಪಾಲಕರು ಭಾವುಕರಾದರು. ‘ನನ್ನ ಮಗ ಈಗ ಈ ಜಗತ್ತಿನಲ್ಲಿಲ್ಲ. ಆದರೆ ಈ ಎಲ್ಲಾ ಯೋಧರ ರೂಪದಲ್ಲಿ ನಾವು ಅನೇಕ ಮಕ್ಕಳನ್ನು ನಾವು ಹೊಂದಿದ್ದೇವೆ ಎನಿಸುತ್ತಿದೆ. ಕಷ್ಟ, ಸುಖದ ಸಂದರ್ಭದಲ್ಲಿ ಎಲ್ಲರೂ ನಮ್ಮೊಟ್ಟಿಗಿರುತ್ತಾರೆ’ ಎಂದು ಸಿಂಗ್‌ ಅವರ ತಂದೆ ನುಡಿದಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago