Featured

ಪುಷ್ಪಾನಂದ ಫೌಂಡೇಶನ್-ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ: Vishwanews24

ಪುಷ್ಪಾನಂದ ಫೌಂಡೇಶನ್-ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ: Vishwanews24

ಕಾಪು: ಪುಷ್ಪಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ವತಿಯಿಂದ ಕಾಪು‌ ಪುರಸಭೆ ವ್ಯಾಪ್ತಿಯ ಎಸ್.ಎಸ್.ಎಲ್.ಸಿ ಜಾಗ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆದಿತ್ಯವಾರ ಕಾಪು ಲಕ್ಷ್ಮೀ ಜನಾರ್ದನ ಸಭಾಂಗಣದಲ್ಲಿ ನಡೆಯಿತು.


ಪ್ರಸ್ತಾವಿಕ ಮಾತುಗಳನ್ನಾಡಿದ ಪ್ರವರ್ತಕ ಯಶ್ಪಾಲ್ ಸುವರ್ಣ “ಯಾವುದೇ ರಾಜಕೀಯ ಲೇಪವಿಲ್ಲದೆ ಈ‌ ಕಾರ್ಯಕ್ರಮ ಆಯೋಜಿಸಿದ್ದು ಬಡ ವಿದ್ಯಾರ್ಥಿಗಳಿಗೆ ನಾವು ಮಾಡಿದ ಸಂಪಾದನೆಯ ಒಂದು ಭಾಗವನ್ನು ಸಮಾಜಕ್ಕೆ ವಿನಿಯೋಗಿಸುವ ಕಾರ್ಯ ಇದಾಗಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟೂ ಸಮಾಜ ಸೇವೆ ಮಾಡುವ ಯೋಗ ದೇವರು ಒದಗಿಸಲಿ ಎನ್ನುವುದೆ ಆಶಯ ” ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಕಿದಿಯೂರು ಉದಯಕುಮಾರ್ ಚಾರಿಟೇಬಲ್ ಟ್ರಸ್ಟ್ ನ‌ ಪ್ರವರ್ತಕರಾದ ಉದಯ್ ಕುಮಾರ್ ಶೆಟ್ಟಿ ಮಾತನಾಡಿ”ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಒಂದು ಹೆಜ್ಜೆ ಮುಂದಡಿ ಇಡಬೇಕು ಹಾಗಾಗಿ ವಿದ್ಯಾರ್ಥಿಗಳು ಇಂದಿನ‌ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ನಂತರ ಹೊಸ ಯಶಸ್ಸಿಗೆ ಒಂದು ಹೆಜ್ಜೆ ಮುಂದೆ ಇಡುತ್ತಾ ಈ ದೇಶಕ್ಕೆ ಒಳ್ಳೆಯ ಪ್ರಜೆಯಾಗಿ ಬಾಳಬೇಕು ಹಾಗೂ ಈ ಪೌಂಡೆಷನ್ ಮಾಡುತ್ತಿರುವ ಈ‌ ಪ್ರತಿಭಾ ಪುರಸ್ಕಾರ ಕಣ್ಣಿಗೆ ಕಾಣದ ದೇವರನ್ನ ವಿದ್ಯಾರ್ಥಿಗಳಲ್ಲಿರುವ ವಿದ್ಯಾದೇವಿ ಸರಸ್ವತಿಯ ಆರಾಧನೆಯಾಗಿದೆ ಎಂದರು.

ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಮಾತನಾಡುತ್ತಾ “ಭಗವಂತನಿಗೆ ಅನೇಕ ರೀತಿಯ ಪೂಜೆಗಳಿವೆ ಅದರಲ್ಲಿ ಯಾವ ಪೂಜೆ ಮಾಡಿದರೆ ಫಲ ಸಿಗುತ್ತೆ ಎಂಬುದು ಮುಖ್ಯವಾಗುತ್ತೆ, ಪ್ರತಿಭಾ ಪುರಸ್ಕಾರ ಅನ್ನುವ ಕಾರ್ಯ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವ ಕೆಲಸವಾಗಿದ್ದು ಸಮಾಜದಲ್ಲಿ ಒಬ್ಬ ವ್ಯಕ್ತಿ ತನ್ನ ಸಂಪತ್ತನ್ನು ಈ ರೀತಿಯಾಗಿ ವಿನಿಯೋಗಿಸಿದರೆ ಅದುವೆ ದೇವರ ಪ್ರಸಾದ ಎಂದರು.

ಕಾಪು ಪುರಸಭಾ ವ್ಯಾಪ್ತಿಯ ಒಟ್ಟು 100 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಭಾಕರ‌ಪೂಜಾರಿ,ಸುಧಾಮ‌ ಶೆಟ್ಟಿ, ಸಂದೀಪ್ ಶೆಟ್ಟಿ ಕಲ್ಯಾ ಕಾಪು,ನೀಲಾನಂದ ನಾಯ್ಕ್,ಪ್ರಸಾದ್ ಶೆಣೈ, ಮೋಹನ್ ಬ‌ಂಗೇರ,ರಮೇಶ್ ಹೆಗ್ಡೆ .ನೀತಾ ಪ್ರಭು,ಜ್ಯೋತಿ ಯು, ಉಪಸ್ಥಿತರಿದ್ದರು.

ಯತೀಶ್ ಕಾರ್ಯಕ್ರಮ ನಿರೂಪಿಸಿ  ಸ್ವಾಗತಿಸಿ ಸುಕೇಶ ಅಮಿಶ್ ವಂದಿಸಿದರು.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

15 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago