ಕಾಪು: ಪುಷ್ಪಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ವತಿಯಿಂದ ಕಾಪು ಪುರಸಭೆ ವ್ಯಾಪ್ತಿಯ ಎಸ್.ಎಸ್.ಎಲ್.ಸಿ ಜಾಗ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆದಿತ್ಯವಾರ ಕಾಪು ಲಕ್ಷ್ಮೀ ಜನಾರ್ದನ ಸಭಾಂಗಣದಲ್ಲಿ ನಡೆಯಿತು.
ಪ್ರಸ್ತಾವಿಕ ಮಾತುಗಳನ್ನಾಡಿದ ಪ್ರವರ್ತಕ ಯಶ್ಪಾಲ್ ಸುವರ್ಣ “ಯಾವುದೇ ರಾಜಕೀಯ ಲೇಪವಿಲ್ಲದೆ ಈ ಕಾರ್ಯಕ್ರಮ ಆಯೋಜಿಸಿದ್ದು ಬಡ ವಿದ್ಯಾರ್ಥಿಗಳಿಗೆ ನಾವು ಮಾಡಿದ ಸಂಪಾದನೆಯ ಒಂದು ಭಾಗವನ್ನು ಸಮಾಜಕ್ಕೆ ವಿನಿಯೋಗಿಸುವ ಕಾರ್ಯ ಇದಾಗಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟೂ ಸಮಾಜ ಸೇವೆ ಮಾಡುವ ಯೋಗ ದೇವರು ಒದಗಿಸಲಿ ಎನ್ನುವುದೆ ಆಶಯ ” ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಕಿದಿಯೂರು ಉದಯಕುಮಾರ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಉದಯ್ ಕುಮಾರ್ ಶೆಟ್ಟಿ ಮಾತನಾಡಿ”ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಒಂದು ಹೆಜ್ಜೆ ಮುಂದಡಿ ಇಡಬೇಕು ಹಾಗಾಗಿ ವಿದ್ಯಾರ್ಥಿಗಳು ಇಂದಿನ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ನಂತರ ಹೊಸ ಯಶಸ್ಸಿಗೆ ಒಂದು ಹೆಜ್ಜೆ ಮುಂದೆ ಇಡುತ್ತಾ ಈ ದೇಶಕ್ಕೆ ಒಳ್ಳೆಯ ಪ್ರಜೆಯಾಗಿ ಬಾಳಬೇಕು ಹಾಗೂ ಈ ಪೌಂಡೆಷನ್ ಮಾಡುತ್ತಿರುವ ಈ ಪ್ರತಿಭಾ ಪುರಸ್ಕಾರ ಕಣ್ಣಿಗೆ ಕಾಣದ ದೇವರನ್ನ ವಿದ್ಯಾರ್ಥಿಗಳಲ್ಲಿರುವ ವಿದ್ಯಾದೇವಿ ಸರಸ್ವತಿಯ ಆರಾಧನೆಯಾಗಿದೆ ಎಂದರು.
ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಮಾತನಾಡುತ್ತಾ “ಭಗವಂತನಿಗೆ ಅನೇಕ ರೀತಿಯ ಪೂಜೆಗಳಿವೆ ಅದರಲ್ಲಿ ಯಾವ ಪೂಜೆ ಮಾಡಿದರೆ ಫಲ ಸಿಗುತ್ತೆ ಎಂಬುದು ಮುಖ್ಯವಾಗುತ್ತೆ, ಪ್ರತಿಭಾ ಪುರಸ್ಕಾರ ಅನ್ನುವ ಕಾರ್ಯ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವ ಕೆಲಸವಾಗಿದ್ದು ಸಮಾಜದಲ್ಲಿ ಒಬ್ಬ ವ್ಯಕ್ತಿ ತನ್ನ ಸಂಪತ್ತನ್ನು ಈ ರೀತಿಯಾಗಿ ವಿನಿಯೋಗಿಸಿದರೆ ಅದುವೆ ದೇವರ ಪ್ರಸಾದ ಎಂದರು.
ಕಾಪು ಪುರಸಭಾ ವ್ಯಾಪ್ತಿಯ ಒಟ್ಟು 100 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಭಾಕರಪೂಜಾರಿ,ಸುಧಾಮ ಶೆಟ್ಟಿ, ಸಂದೀಪ್ ಶೆಟ್ಟಿ ಕಲ್ಯಾ ಕಾಪು,ನೀಲಾನಂದ ನಾಯ್ಕ್,ಪ್ರಸಾದ್ ಶೆಣೈ, ಮೋಹನ್ ಬಂಗೇರ,ರಮೇಶ್ ಹೆಗ್ಡೆ .ನೀತಾ ಪ್ರಭು,ಜ್ಯೋತಿ ಯು, ಉಪಸ್ಥಿತರಿದ್ದರು.
ಯತೀಶ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ಸುಕೇಶ ಅಮಿಶ್ ವಂದಿಸಿದರು.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…